Home namma chikmagalur ಬೆಂಗಳೂರು ಕಾಲ್ತುಳಿತ ಸರ್ಕಾರದ ವೈಫಲ್ಯ ಆದರೆ ರಾಜೀನಾಮೆ ನೀಡುವ ಅಗತ್ಯವಿಲ್ಲ
namma chikmagalurchikamagalurHomeLatest News

ಬೆಂಗಳೂರು ಕಾಲ್ತುಳಿತ ಸರ್ಕಾರದ ವೈಫಲ್ಯ ಆದರೆ ರಾಜೀನಾಮೆ ನೀಡುವ ಅಗತ್ಯವಿಲ್ಲ

Share
Share

ಚಿಕ್ಕಮಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಹಾಗೂ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗುತ್ತಿದ್ದಾರೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಂಬ ಅನುಮಾನ ಚಿಕ್ಕಮಗಳೂರಿನಲ್ಲಿ ನೀಡಿರುವ ಅವರ ಹೇಳಿಕೆಯಿಂದಾಗಿ ಕಾಡಲಾರಂಭಿಸಿದೆ.

ಭಾನುವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯಲ್ಲಿ 26 ಜನ ಮೃತಪಟ್ಟರು. ಇದು ಕೇಂದ್ರ ಸರ್ಕಾರದ ವೈಫಲ್ಯ. ಆದರೆ ನಾವು ಪ್ರಧಾನ ಮಂತ್ರಿ ರಾಜೀನಾಮೆ ಕೇಳಿದ್ದೆವೆಯೇ? ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿಯೂ ವೈಫಲ್ಯವಾಗಿದೆ ನಿಜ. ಆದರೆ ಯಾರೂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಹಿಂದೆ ಬೇರೆ ಸರ್ಕಾರಗಳು ಇದ್ದಾಗ ಸಾಕಷ್ಟು ಘಟನೆಗಳು ನಡೆದಿವೆ. ಆಗ ನಾವು ಯಾರ ರಾಜೀನಾಮೆಯನ್ನು ಕೇಳಿರಲಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಜೊತೆ ಯುದ್ಧ ಆರಂಭವಾದಾಗ ಎಲ್ಲಾ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದವು. ಇದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದು ಹೇಳಿದರು.

ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಯಾರು ಅನುಮತಿ ಕೇಳಿದರು, ಅನುಮತಿ ನೀಡಲು ಯಾರು ನಿರಾಕರಿಸಿದರು, ಬಳಿಕ ಅನುಮತಿ ಕೊಟ್ಟವರು ಯಾರು ಎಂಬುದು ಯಾರಿಗೂ ಗೊತ್ತಿಲ್ಲ. ಇದೆಲ್ಲವೂ ಬೂದಿ ಮುಚ್ಚಿದ ಕೆಂಡದಂತಿದೆ. ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಎನ್ನುವುದು ತನಿಖೆಯಿಂದ ಹೊರ ಬರಬೇಕು ಎಂದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಹೀಗೆ ವಿವಿಧ ಹಂತದಲ್ಲಿ ಏನೇನು ಆಗಿದೆ ಎಂಬ ಸತ್ಯ ತನಿಖೆಯಿಂದ ಹೊರ ಬರಬೇಕು. ಬೆಂಗಳೂರು ಘಟನೆ ಬಗ್ಗೆ ಹೈಕಮಾಂಡ್ ಗೆ ಜವಾಬ್ದಾರಿ ಇದೆ. ಹೀಗಾಗಿ ದೆಹಲಿಗೆ ಕರೆಸಿ ವರದಿ ಕೇಳಬಹುದು. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ಕೊಡಬಹುದು ಎಂದು ತಿಳಿಸಿದರು.

ಸಿಎಂ ಬದಲಾವಣೆ ಇದೆಯೇ ಎಂಬ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ, ಅದೇಗೆ ಸಿಎಂ ಬದಲಾವಣೆಯಾಗುತ್ತಾರೆ? ನಿಮಗೆ ಹೇಳಿದ್ದು ಯಾರು? ಸಿಎಂ ಅಧಿಕಾರಾವಧಿ ಎರಡೂವರೆ ವರ್ಷ ಎಂದು ಹೇಳಿದವರು ಯಾರು ಎಂದು ಪ್ರಶ್ನಿಸಿದ ಅವರು, ಎರಡೂವರೆ ವರ್ಷ ಎಂದು ಎಲ್ಲೂ ಇಲ್ಲ. ಈಗಲೂ ಸಿಎಂ ಸಿದ್ದರಾಮಯ್ಯ ಅವರೇ ಇದ್ದಾರೆ. ಮುಂದೆಯೂ ಅವರೇ ಇರುತ್ತಾರೆ ಅಷ್ಟೇ ಎಂದು ಪ್ರತಿಕ್ರಿಯಿಸಿದರು‌.

ಬೆಳಗಾವಿ ವಿಭಜನ ಸಧ್ಯಕ್ಕಿಲ್ಲ. ಆಮೇಲೆ ವಿಭಜನೆ ಮಾಡಬಹುದು. ಬೆಳಗಾವಿ ವಿಭಜನೆ ಮಾಡುವ ಪ್ರಸ್ತಾವವೇನೋ ಇದೆ. ಆದರೆ ಅದು ಸಧ್ಯಕ್ಕಿಲ್ಲ ಎಂದು ಹೇಳಿದರು.

ಶಾಸಕ ಎಚ್.ಡಿ.ತಮ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಎಚ್.ಪಿ.ಮಂಜೇಗೌಡ, ಮಾಜಿ ಸಂಸದ ಚಂದ್ರಪ್ಪ, ಪ್ರಮುಖರಾದ ಡಾ. ಡಿ.ಎಲ್.ವಿಜಯ್ ಕುಮಾರ್, ಹಿರೇಮಗಳೂರು ರಾಮಚಂದ್ರ ಮತ್ತಿತರರಿದ್ದರು.

Bengaluru stampede is a failure of the government but there is no need to resign

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...