Home namma chikmagalur chikamagalur ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?
chikamagalurHomeLatest Newsnamma chikmagalur

ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?

Share
Share

ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆಂಡ್ ಯುಗ ಪ್ರಾರಂಭವಾಗಿದೆ. ಇನ್ನೂ ಎಷ್ಟು ಜನಕ್ಕೆ ಸಸ್ಪೆಂಡ್ ಸಿಟಿ.ಹೊಡೆಯಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.ಯಾರನ್ನು ಸಸ್ಪೆಂಡ್ಮಾಡಬೇಕು ಯಾರಿಗೆ ಅತಿಥ್ಯ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ. ಆದರೆ ಅತಿಥ್ಯ ನೀಡುವಾಗ ಅವರ ಘನ ಕಾರ್ಯಗಳ ಅವಲೋಕನ ಮಾಡಬೇಕಲ್ಲವೇ?

ನಿರಂಜನ್ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಮತ್ತು ಹಿಂದೆ ವಿಧಾನ ಪರಿಷತ್ ಮತ್ತು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ ಎಂದು ಕಾರಣ ನೀಡಲಾಗಿದೆ. ಹೌದು ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ರಾಜಕೀಯ ಸಲ್ಲದು ಎಂದು ಭಾಷಣ ಬಿಗಿಯುವವರು ಪಕ್ಷ ಹೇಳಿದ ಅಭ್ಯರ್ಥಿ ವಿರುದ್ದ ಸ್ಪರ್ಧೆ ಮಾಡಿರುವುದಕ್ಕೆ ಸಸ್ಪೆಂಡ್ ಭಾಗ್ಯ ಕೊಡಲಾಗಿದೆ.

ಆನಂದ್ ನಗರದ ಸಿ,ಡಿ,ಎ ಅಧ್ಯಕ್ಷನಾಗಿದ್ದವನು ಮಹಿಳೆ ಯೊಂದಿಗೆ ಇರುವಾಗ ಬಿಜೆಪಿಯವರು ತದಕಿ ಹಾದಿ ರಂಪ ಬೀದಿ ರಂಪವಾಗಿ ಎಲ್ಲೆಡೆಯೂ ವಿಡಿಯೋ ಹರಿದಾಡಿದರೂ ಪಕ್ಷಕ್ಕೆ ಮುಜುಗರ ತಂದಿಲ್ಲಾವೇ? ಆದರೆ ಇದುವರೆವಿಗೂ ಆತನ ಸಸ್ಪೆಂಡ್ ಆಗದಿರುವುದರ ರಹಸ್ಯ ಏನಿರಬಹುದು? ಆನಂದ್ ಹಿನ್ನೆಲೆ ಕೆದಕಿದರೆ ಬಹಳಷ್ಟು ವಿಷಯಗಳಿವೆ ಎಂದು ಬಿಜೆಪಿಯಲ್ಲಿ ಮಾತನಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಸಿ.ಟಿ.ರವಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನ ಸ್ವೀಕರಿಸಿದ ದಿನ ನಿರಂಜನ್ ಗೆ ಸಸ್ಪೆಂಡ್ ಪತ್ರ ತಲುಪಿದರೆ ಆನಂದ್ ಪತ್ರಿಕೆಗಳು ಮತ್ತು ನ್ಯೂಸ್ ಚಾನಲ್ ಗಳು ಸುದ್ದಿ ಪ್ರಸಾರ ಮಾಡಬಾರುದು ಎಂದು ಕೋರ್ಟ್ ಆದೇಶದ ಪ್ರತಿ ಕೊಡಿಸುತ್ತಾರೆ.

ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂದು ಜನ ಮೂಗಿನ ಮೇಲೆ ಬೆರಳಿಟ್ಟುಕೊಂಡು ನೋಡುತ್ತಿದ್ದಾರೆ.ಹೇಳುವುದು ವೇದ ತಿನ್ನುವುದು ಬದನೆಯಕಾಯಿ ಎಂದು ಹಿರಿಯರೊಬ್ಬರು ಹೇಳಿದ ಮಾತು ತಲೆಯಲ್ಲಿ ಹುಳ ಬಿಟ್ಟಂತೆ ಆಗಿದೆ.

Bhaja Bhajantri Niranjan suspended in BJP! Guest for Anand?

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...