Home Latest News ಮತ್ತೆ ಎಂಟ್ರಿ ಕೊಟ್ಟ ಭೀಮ : ಕಾಡಾನೆ ಕಂಡು ಜನರು ಗಾಬರಿ
Latest News

ಮತ್ತೆ ಎಂಟ್ರಿ ಕೊಟ್ಟ ಭೀಮ : ಕಾಡಾನೆ ಕಂಡು ಜನರು ಗಾಬರಿ

Share
Share

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ನಿಲ್ಲುವ ಲಕ್ಷಣ ಕಾಣುತ್ತಿಲ್ಲ…. ಬೀಟಮ್ಮ ಆನೆಗಳ ಹಿಂಡು ಚಿಕ್ಕಮಗಳೂರು ಜಿಲ್ಲೆ ತೊರೆದು ಹಾಸನ ಜಿಲ್ಲೆಗೆ ಎಂಟ್ರಿ ಆಗುತ್ತಿದ್ದಂತೆ ಇನ್ನೇನು ಆನೆಗಳ ಕಾಟಕ್ಕೆ ಸದ್ಯಕ್ಕೆ ಮುಕ್ತಿ ಸಿಕ್ಕಿತು ಎನ್ನುವ ನೆಮ್ಮದಿಯಲ್ಲಿದ್ದ ಮಲೆನಾಡಿನ ಜನರಿಗೆ ಮತ್ತೆ ಆನೆಯ ಕಾಟ ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಬಿಕ್ಕಿಮನೆ ಗ್ರಾಮಗಳಲ್ಲಿ ಒಂಟಿ ಸಲಗ ಭೀಮ ಕಳೆದ ರಾತ್ರಿ ಇಡಿ ಗ್ರಾಮ ಸುತ್ತಮುತ್ತ ಓಡಾಡಿ ಆತಂಕ ಸೃಷ್ಟಿಸಿದೆ.

ಒಂಟಿ ಸಲಗದ ಗ್ರಾಮದ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿದ್ದು, ದೃಶ್ಯಗಳನ್ನು ನೋಡಿದ ಬಳಿಕ ಒಂಟಿ ಸಲಗ ಗ್ರಾಮಕ್ಕೆ ಬಂದಿರುವುದು ಗೊತ್ತಾಗಿದೆ. ಹಾಸನ ಜಿಲ್ಲೆಯ ಗಡಿ ಭಾಗದಿಂದ ನಿರಂತರವಾಗಿ ಕಾಡಾನೆಗಳು ಚಿಕ್ಕಮಗಳೂರು ತಾಲೂಕಿನ ಗ್ರಾಮಗಳಿಗೆ ಲಗ್ಗೆ ಇಡುತ್ತಿರುವುದು ಸ್ಥಳೀಯ ಕಾಫಿ ತೋಟದ ಮಾಲೀಕರಲ್ಲಿ ಬೆಳೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೂಡಲೇ ಪದೇ ಪದೇ ಸುತ್ತಮುತ್ತಲಿನ ಗ್ರಾಮಗಳಿಗೆ ಎಂಟ್ರಿ ಕೊಡುತ್ತಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಸಿ.ಸಿ ಕ್ಯಾಮೆರಾದಲ್ಲಿ ಆನೆ ಸೆರಾಗಿರುವ ಆದಾರದಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎಂಬಂತೆ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆ ಕೆಡಿಸಿದ್ದ ಬೀಟಮ್ಮ ಗ್ಯಾಂಗ್ ನ ಭೀಮ ಆನೆ ಮತ್ತೆ ಗಡಿ ಭಾಗಕ್ಕೆ ಎಂಟ್ರಿ ಕೊಟ್ಟಿದ್ದು  ಅಪಾಯಕಾರಿ ಎಂದೇ ಬಿಂಬಿತ ಆಗಿರುವ ಕಾಡಾನೆ ಬೇಲೂರು ಬಿಕ್ಕೊಡು ಕಡೆಯಿಂದ ಚಿಕ್ಕಗಳೂರು ಕಡೆಗೆ ಪುನರ್ ಆಗಮನ ಮಾಡಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...