Home Latest News ಮತ್ತೆ ಎಂಟ್ರಿ ಕೊಟ್ಟ ಭೀಮ : ಕಾಡಾನೆ ಕಂಡು ಜನರು ಗಾಬರಿ
Latest News

ಮತ್ತೆ ಎಂಟ್ರಿ ಕೊಟ್ಟ ಭೀಮ : ಕಾಡಾನೆ ಕಂಡು ಜನರು ಗಾಬರಿ

Share
Share

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ನಿಲ್ಲುವ ಲಕ್ಷಣ ಕಾಣುತ್ತಿಲ್ಲ…. ಬೀಟಮ್ಮ ಆನೆಗಳ ಹಿಂಡು ಚಿಕ್ಕಮಗಳೂರು ಜಿಲ್ಲೆ ತೊರೆದು ಹಾಸನ ಜಿಲ್ಲೆಗೆ ಎಂಟ್ರಿ ಆಗುತ್ತಿದ್ದಂತೆ ಇನ್ನೇನು ಆನೆಗಳ ಕಾಟಕ್ಕೆ ಸದ್ಯಕ್ಕೆ ಮುಕ್ತಿ ಸಿಕ್ಕಿತು ಎನ್ನುವ ನೆಮ್ಮದಿಯಲ್ಲಿದ್ದ ಮಲೆನಾಡಿನ ಜನರಿಗೆ ಮತ್ತೆ ಆನೆಯ ಕಾಟ ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಬಿಕ್ಕಿಮನೆ ಗ್ರಾಮಗಳಲ್ಲಿ ಒಂಟಿ ಸಲಗ ಭೀಮ ಕಳೆದ ರಾತ್ರಿ ಇಡಿ ಗ್ರಾಮ ಸುತ್ತಮುತ್ತ ಓಡಾಡಿ ಆತಂಕ ಸೃಷ್ಟಿಸಿದೆ.

ಒಂಟಿ ಸಲಗದ ಗ್ರಾಮದ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿದ್ದು, ದೃಶ್ಯಗಳನ್ನು ನೋಡಿದ ಬಳಿಕ ಒಂಟಿ ಸಲಗ ಗ್ರಾಮಕ್ಕೆ ಬಂದಿರುವುದು ಗೊತ್ತಾಗಿದೆ. ಹಾಸನ ಜಿಲ್ಲೆಯ ಗಡಿ ಭಾಗದಿಂದ ನಿರಂತರವಾಗಿ ಕಾಡಾನೆಗಳು ಚಿಕ್ಕಮಗಳೂರು ತಾಲೂಕಿನ ಗ್ರಾಮಗಳಿಗೆ ಲಗ್ಗೆ ಇಡುತ್ತಿರುವುದು ಸ್ಥಳೀಯ ಕಾಫಿ ತೋಟದ ಮಾಲೀಕರಲ್ಲಿ ಬೆಳೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೂಡಲೇ ಪದೇ ಪದೇ ಸುತ್ತಮುತ್ತಲಿನ ಗ್ರಾಮಗಳಿಗೆ ಎಂಟ್ರಿ ಕೊಡುತ್ತಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಸಿ.ಸಿ ಕ್ಯಾಮೆರಾದಲ್ಲಿ ಆನೆ ಸೆರಾಗಿರುವ ಆದಾರದಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎಂಬಂತೆ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆ ಕೆಡಿಸಿದ್ದ ಬೀಟಮ್ಮ ಗ್ಯಾಂಗ್ ನ ಭೀಮ ಆನೆ ಮತ್ತೆ ಗಡಿ ಭಾಗಕ್ಕೆ ಎಂಟ್ರಿ ಕೊಟ್ಟಿದ್ದು  ಅಪಾಯಕಾರಿ ಎಂದೇ ಬಿಂಬಿತ ಆಗಿರುವ ಕಾಡಾನೆ ಬೇಲೂರು ಬಿಕ್ಕೊಡು ಕಡೆಯಿಂದ ಚಿಕ್ಕಗಳೂರು ಕಡೆಗೆ ಪುನರ್ ಆಗಮನ ಮಾಡಿದೆ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...