Home namma chikmagalur ಹುತ್ತಿನಗದ್ದೆಯಲ್ಲಿ ಆನೆಗಳು ದಾಳಿಗೆ ಬೈಕ್‌ ಹಾನಿ
namma chikmagalurchikamagalurHomeLatest News

ಹುತ್ತಿನಗದ್ದೆಯಲ್ಲಿ ಆನೆಗಳು ದಾಳಿಗೆ ಬೈಕ್‌ ಹಾನಿ

Share
Share

ಜಯಪುರ: ಕೊಪ್ಪ ತಾಲ್ಲೂಕಿನ ಲೋಕನಾಥಪುರ ಸಮೀಪದ ಕೋಣಂಬಿ ಹಾಗೂ ಹೇರೂರು ಗ್ರಾಮದ ಹುತ್ತಿನಗದ್ದೆಯಲ್ಲಿ ಆನೆಗಳು ದಾಳಿ ಮಾಡಿ ಬೆಳೆ ಹಾಗೂ ಬೈಕ್‌ ಹಾನಿ ಮಾಡಿವೆ.

ಹೇರೂರು ಗ್ರಾಮದ ಹುತ್ತಿನಗದ್ದೆಯ ನಟರಾಜ್ ಅವರ ತೋಟದಲ್ಲಿ ಎರಡು ಆನೆಗಳು ಬೆಳೆದಿದ್ದ ಅಡಿಕೆ, ಬಾಳೆ, ಕಾಫಿ ಗಿಡಗಳನ್ನು ತುಳಿದು ನಾಶ ಮಾಡಿವೆ. ಸಮೀಪದ ಸೈಟ್ ಬಳಿ ನಿಲ್ಲಿಸಿದ್ದ ಬೈಕನ್ನು ತುಳಿದು ಜಖಂಗೊಳಿಸಿವೆ.

ಸ್ಥಳಕ್ಕೆ ಕೊಪ್ಪ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಆನೆಗಳನ್ನು ಓಡಿಸಲು ಯತ್ನಿಸಿದ್ದಾರೆ. ಲೋಕನಾಥಪುರ ಸಮೀಪದ ಕೋಣಂಬಿ ಶ್ರೀಕರ, ನಾಗರಾಜ್, ಗುರುಪ್ರಸನ್ನ ಅವರ ಬೆಳೆ ಹಾನಿಯಾಗಿದೆ.

ಸ್ಥಳಕ್ಕೆ ಬಾರದ ಅಧಿಕಾರಿಗಳು: ಆನೆಗಳು ದಾಳಿ ನಡೆಸಿದ ಬಗ್ಗೆ ಕೊಪ್ಪ ಡಿಎಫ್‌ಒ ಶಿವಶಂಕರ್ ಅವರನ್ನು ಶ್ರೀಕರ ಅವರು ದೂರವಾಣಿ ಮೂಲಕ ಸಂಪರ್ಕಿಸಿ ತಿಳಿಸಿದಾಗ ಸೋಮವಾರ ಸ್ಥಳಕ್ಕೆ ಅಧಿಕಾರಿಗಳು ಬರುತ್ತಾರೆ ಎಂದು ಹೇಳಿದ್ದರು. ಅಧಿಕಾರಿಯ ಉತ್ತರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಬೆಳೆಹಾನಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದ್ದಾರೆ.

Bike damaged in elephant attack in Huttinagadde

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...