Home Latest News ಬೈಕ್‌ ಅಡ್ಡಗಟ್ಟಿದ್ದ ಸುಲಿಗೆಕೋರರ ಬಂಧನ
Latest NewschikamagalurHomenamma chikmagalur

ಬೈಕ್‌ ಅಡ್ಡಗಟ್ಟಿದ್ದ ಸುಲಿಗೆಕೋರರ ಬಂಧನ

Share
Share
ಕಡೂರು: ಬೀರೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಿನಾಗೂರು ಎಂಬಲ್ಲಿ ತೋಟಕ್ಕೆ ತೆರಳುತ್ತಿದ್ದ ಗೋವಿಂದನಾಯ್ಕ ಎಂಬ ಕಾರ್ಮಿಕನನ್ನು ಅಡ್ಡಗಟ್ಟಿ ಚಾಕು ಮತ್ತು ರಾಡ್‌ನಿಂದ ಹಲ್ಲೆ ನಡೆಸಿ ಚಿನ್ನದ ಸರ ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ತುಂಗಾ ನಗರದ ಮೊಹಮದ್‌ ತಬರಕ್‌ ಉಲ್ಲ, ಮಹಮದ್‌ ರಿಯಾಜ್‌, ಮೊಹಮದ್‌ ಮುಬಾರಕ್‌ ಎಂಬುವರನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ.

ಕೃತ್ಯಕ್ಕೆ ಬಳಸಿದ್ದ ಬೈಕ್‌ ಹಾಗೂ 7.8 ಗ್ರಾಂನ ಚಿನ್ನದ ಸರ ವಶಕ್ಕೆ ಪಡೆದಿದ್ದಾರೆ.  ಅಪರಾಧ ಕೃತ್ಯಕ್ಕೆ ಬಳಸುವ ಸಂಬಂಧ ಕೆ.ಚಟ್ಟನಹಳ್ಳಿ ಬಳಿ ಬೈಕ್ ಕಳವು ಮಾಡಿದ್ದ ಆರೋಪಿಗಳು, ಭದ್ರಾವತಿ ಬಸ್‌ ನಿಲ್ದಾಣದ ಸಮೀಪ ಇರುವ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಬೀರೂರು ಸಿಪಿಐ ಎಸ್‌.ಎನ್.ಶ್ರೀಕಾಂತ್‌ ನೇತೃತ್ವದಲ್ಲಿ ಪಿಎಸ್‌ಐಗಳಾದ ಡಿ.ವಿ.ತಿಪ್ಪೇಶ್‌, ಗಣಪತಿ ಶೇರುಗಾರ್‌, ಅಪರಾಧ ವಿಭಾಗದ ಸಿಬ್ಬಂದಿ ಡಿ.ವಿ.ಹೇಮಂತ್‌ಕುಮಾರ್‌, ಬಿ.ಪಿ.ಕೃಷ್ಣಮೂರ್ತಿ, ಬಿ.ಎಚ್‌.ರಾಜಪ್ಪ, ಪಾಂಡುರಂಗ, ಶಿವಾನಂದ, ಶಿವಕುಮಾರ್‌, ಮಂಜಾನಾಯ್ಕ ಪಾಲ್ಗೊಂಡಿದ್ದರು. ಆರೋಪಿಗಳನ್ನು ಪತ್ತೆಮಾಡಿರುವ ತಂಡಕ್ಕೆ ಎಸ್‌.ಪಿ ವಿಕ್ರಂ ಅಮಟೆ ಬಹುಮಾನ ಘೋಷಿಸಿದ್ದಾರೆ.

Bike-jacking robbers arrested

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...