Home namma chikmagalur chikamagalur ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು
chikamagalurHomeLatest Newsnamma chikmagalur

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

Share
Share

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು ಬೈಪಾಸ್ ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು, ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಸೀಗೇಹಡ್ಲು ನಿವಾಸಿಯಾಗಿ, ಸದ್ಯ ಅಜ್ಜಂಪುರದಲ್ಲಿ ವಾಸವಿದ್ದ ಮಂಜಾನಾಯ್ಕ (೪೧) ಮೃತಪಟ್ಟವರು. ಗುತ್ತಿಗೆಗೆ ಪಡೆದಿದ್ದ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದ ಮಂಜಾನಾಯ್ಕ ಒಂದು ವಾರದಿಂದ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ನಸುಕಿನಲ್ಲಿ ಕುಟುಂಬದವರಿಗೆ ಕರೆ ಮಾಡಿದ ಅಪರಿಚಿತರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

ಮೃತರ ಪುತ್ರ ಹಾಗೂ ಪತ್ನಿ ಬೀರೂರು ಬೈಪಾಸ್ ರಸ್ತೆಗೆ ತೆರಳಿ ಪರಿಶೀಲಿಸಿದಾಗ ಮಂಜಾನಾಯ್ಕ ರಸ್ತೆಯ ಬದಿ ಬಿದ್ದಿದ್ದು, ಎಡದ ಕೆನ್ನೆ ಮತ್ತು ಕಿವಿಯ ಬಳಿ ಪೆಟ್ಟು ಬಿದ್ದಿತ್ತು. ಅವರು ಚಾಲನೆ ಮಾಡುತ್ತಿದ್ದ ಬೈಕ್ ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಬೀರೂರು ಆಸ್ಪತ್ರೆಗೆ ಕರೆತಂದಾಗ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದು, ಪುತ್ರ ರಾಹುಲ್ ನಾಯ್ಕ ನೀಡಿದ ದೂರಿನ ಅನ್ವಯ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು-ಬೈಕ್ ಡಿಕ್ಕಿಯಲ್ಲಿ ಸವಾರ ಸಾವು

ಕಡೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬೀರೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಡಿತಿಮ್ಮಾಪುರ ಗೇಟ್ ಬಳಿ ನಡೆದಿದೆ.
ಚಿಕ್ಕಮಗಳೂರು ನಗರದ ಪ್ರದೀಪ್ (೩೫) ಮೃತಪಟ್ಟವರು.

ಲಿಂಗದಹಳ್ಳಿ ಹೋಬಳಿಯ ಮಲ್ಲೇನಹಳ್ಳಿ ನಿವಾಸಿ ಚಂದ್ರಶೇಖರ್, ಬೀರೂರು-ಲಿಂಗದಹಳ್ಳಿ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಹುಣಸಘಟ್ಟ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಶಾಲೆಯ ಕೆಲಸ ಮುಗಿಸಿ ಕಾರಿನಲ್ಲಿ ತರೀಕೆರೆ ಕಡೆಯಿಂದ ಬೀರೂರು ಕಡೆಗೆ ಬರುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಬೈಕ್ ಕಾರಿಗೆ ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಪಘಾತದ ಬಳಿಕ ಚಂದ್ರಶೇಖರ್ ಕಾರಿನಿಂದ ಇಳಿದು ನೋಡಿದಾಗ ಬೈಕ್ ಸವಾರನ ತಲೆ ಹಾಗೂ ಎಡಗಾಲಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಅಂಬುಲೆನ್ಸ್‌ನಲ್ಲಿ ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಬಳಿಕ ಆಸ್ಪತ್ರೆಗೆ ತೆರಳಿದ ಚಂದ್ರಶೇಖರ್‌ಗೆ, ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Biker dies in vehicle collision

 

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ: 9.20 ಲಕ್ಷ ಗಣತಿ ನಮೂನೆಗಳ ವಿತರಣೆ

ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Intensive Revision...