Home namma chikmagalur chikamagalur ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಡ್ಡಾಯ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಡ್ಡಾಯ

Share
Share

ಚಿಕ್ಕಮಗಳೂರು:  ಭಾರತದ ನಾಗರಿಕ ನೋಂದಣಿ ನಿಯಮದ ಪ್ರಕಾರ ಜನನ-ಮರಣ ನೋಂದಣಿಯನ್ನು ಪ್ರತಿಯೊಬ್ಬರೂ ತಪ್ಪದೇ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಇಂದು ನಡೆದ ಜನನ-ಮರಣ ನೋಂದಣಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿಯಾಗಿ ಇರುವ ಒಟ್ಟು ೧೨೩೧ ಕೇಂದ್ರಗಳಲ್ಲಿ ಜನನ-ಮರಣ ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು, ಸರ್ಕಾರಿ ಆಸ್ಪತ್ರೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಈ ನೋಂದಣಿ ಮಾಡಬಹುದಾಗಿದ್ದು, ಸಾರ್ವಜನಿಕರು ಜನನ, ಮರಣ ಸಂಭವಿಸಿದ ೨೧ ದಿನಗಳ ಒಳಗಾಗಿ ಸಮೀಪದ ಕೇಂದ್ರದಲ್ಲಿ ನೋಂದಾಯಿಸುವುದು ಕಡ್ಡಾಯ ಎಂದು ಹೇಳಿದರು.

೨೧ ದಿನಗಳ ನಂತರ ೩೦ ದಿನಗಳ ಒಳಗೆ ನೋಂದಾಯಿಸಲು ಕೂಡ ಅವಕಾಶವಿದ್ದು, ನಾಗರಿಕರು ತಪ್ಪದೇ ನೋಂದಣಿ ಮಾಡಿಸಬೇಕು ಎಂದ ಅವರು, ಜಿಲ್ಲೆಯ ಪ್ರಸ್ತುತ ನೋಂದಣಿ ಘಟಕದಲ್ಲಿ ನೋಂದಣಿ ಮಾಡುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಪ್ರತೀ ವರ್ಷ ತರಬೇತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರದಿಂದ ಆಗಾಗ ಹೊರಡಿಸಲಾಗುತ್ತಿರುವ ಸುತ್ತೋಲೆಗಳ ಅನ್ವಯ ಜನನ-ಮರಣ ನೋಂದಣಿ ಮಾಡುವ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದರು ಹೇಳಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಯೂ ಆಗಿರುವ ಅಪರ ಜಿಲ್ಲಾ ಜನನ, ಮರಣ ನೋಂದಣಾಧಿಕಾರಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಸೀಲ್ದಾರರು ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.

Birth and death registration is mandatory in the district.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....