Home namma chikmagalur chikamagalur ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ
chikamagalurHomeLatest Newsnamma chikmagalur

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

Share
Share

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ ಸಾಧಿಸಿದ್ದಾರೆ.

2023 ರಲ್ಲಿ ನಡೆದ ಮತ ಎಣಿಕೆ ಯಲ್ಲಿ ಸಿಂಧುವಾಗಿದ್ದ 358 ಮತಗಳು 2026 ರ ಮರುಮತ ಎಣಿಕೆಯಲ್ಲಿ ಅಸಿಂಧು ಆಗುವ ಮೂಲಕ ಡಿ .ಎನ್ .ಜೀವರಾಜ್ 56 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಆ ಮೂಲಕ ಕಳೆದ ಮೂರು ವರ್ಷಗಳಿಂದ ನಡೆದ ಹಗ್ಗ ಜಗ್ಗಾಟದಲ್ಲಿ ಕಾಂಗ್ರೆಸ್ ಶಾಸಕ ರಾಜೇಗೌಡ ಸೋಲನ್ನು ಅನುಭವಿಸಿದ್ದಾರೆ.

ನ್ಯಾಯಾಲಯದ ಆದೇಶದ ಅನ್ವಯ ತಿರಸ್ಕೃತ ಅಂಚೆ ಮತಗಳ ಮರು ಎಣಿಕೆ ಸಂದರ್ಭದಲ್ಲಿ ಎರಡು ಹೆಚ್ಚುವರಿ ಮತಗಳನ್ನು ರಾಜೇಗೌಡ ಪಡೆದಿದ್ದರು. ಇದನ್ನೇ ಅಂತಿಮವೆಂದು ಪರಿಗಣಿಸಿದ ಕಾರ್ಯಕರ್ತರು/ಮುಖಂಡರು ವಿಜಯೋತ್ಸವ ಆಚರಿಸಿದ್ದರು. ಸಿಂಧುವಾದ ಅಂಚೆ ಮತಗಳನ್ನೂ ಎಣಿಕೆ ಮಾಡುವಂತೆ ಜೀವರಾಜ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಮಧ್ಯ ರಾತ್ರಿವರೆಗೂ ಮರು ಎಣಿಕೆ ನಡೆದಾಗ ಅಂದು ಸಿಂಧುವಾಗಿದ್ದ ಮತಗಳಲ್ಲಿ ಭಾರಿ ಪ್ರಮಾಣದಲ್ಲಿ ‘ಅಸಿಂಧು’ ಮತಗಳು ಗೋಚರಿಸಿ ಡಿ. ಎನ್. ಜೀವರಾಜ್ ವಿಜಯದ ನಗೆ ಬೀರಿದ್ದಾರೆ.

ಈ ಫಲಿತಾಂಶ ಶಾಸಕ ರಾಜೇಗೌಡ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದು “ಮತಗಳನ್ನು ತಿದ್ದಲಾಗಿದೆ” ಎನ್ನುವ ಗಂಭೀರ ಆರೋಪ ಮಾಡಿದ್ದು ಮುಂದಿನ ನಡೆ ಕಾದು ನೋಡಬೇಕಾಗಿದೆ.

ಮತಗಳ ಎಣಿಕೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದ್ದು, ಅಂತಿಮವಾಗಿ ನ್ಯಾಯಾಲಯ ನೀಡುವ ತೀರ್ಪು ಆಧರಿಸಿ ರಾಜೇಗೌಡ ಮತ್ತು ಜೀವರಾಜ್ ಚುನಾವಣಾ ಭವಿಷ್ಯ ನಿರ್ಧಾರವಾಗಲಿದೆ.

ಅಸಿಂಧು 279 ಮತಗಳು ಎಣಿಕೆ ಅಂತಿಮ ಎಂದು ಬಹಳಷ್ಟು ಜನ ತಪ್ಪಾಗಿ ತಿಳಿದಿರುವುದೇ ಪ್ರಮಾದಕ್ಕೆಕಾರಣವಾಯಿತು.ವ್ಯಾಲಿಡ್ ಮತಗಳು ಎಣಿಕೆಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಇರುವುದು ಒಂದುಕಾರಣವಾಗಿತ್ತು.

2023 ರಲ್ಲಿಸಿಂಧುವಾಗಿರುವ ಮತಗಳು ಇಷ್ಟೊಂದು ಸಂಖ್ಯೆಯಲ್ಲಿವ್ಯತ್ಯಾಸ ಆಗುತ್ತದೆ ಎಂದುಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೂ ನಿರೀಕ್ಷಿಸಿರಲಿಲ್ಲ.

BJP candidate D. N. Jeevaraj wins in recount

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...