Home namma chikmagalur chikamagalur ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ
chikamagalurHomeLatest Newsnamma chikmagalur

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

Share
Share

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ ಸಾಧಿಸಿದ್ದಾರೆ.

2023 ರಲ್ಲಿ ನಡೆದ ಮತ ಎಣಿಕೆ ಯಲ್ಲಿ ಸಿಂಧುವಾಗಿದ್ದ 358 ಮತಗಳು 2026 ರ ಮರುಮತ ಎಣಿಕೆಯಲ್ಲಿ ಅಸಿಂಧು ಆಗುವ ಮೂಲಕ ಡಿ .ಎನ್ .ಜೀವರಾಜ್ 56 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಆ ಮೂಲಕ ಕಳೆದ ಮೂರು ವರ್ಷಗಳಿಂದ ನಡೆದ ಹಗ್ಗ ಜಗ್ಗಾಟದಲ್ಲಿ ಕಾಂಗ್ರೆಸ್ ಶಾಸಕ ರಾಜೇಗೌಡ ಸೋಲನ್ನು ಅನುಭವಿಸಿದ್ದಾರೆ.

ನ್ಯಾಯಾಲಯದ ಆದೇಶದ ಅನ್ವಯ ತಿರಸ್ಕೃತ ಅಂಚೆ ಮತಗಳ ಮರು ಎಣಿಕೆ ಸಂದರ್ಭದಲ್ಲಿ ಎರಡು ಹೆಚ್ಚುವರಿ ಮತಗಳನ್ನು ರಾಜೇಗೌಡ ಪಡೆದಿದ್ದರು. ಇದನ್ನೇ ಅಂತಿಮವೆಂದು ಪರಿಗಣಿಸಿದ ಕಾರ್ಯಕರ್ತರು/ಮುಖಂಡರು ವಿಜಯೋತ್ಸವ ಆಚರಿಸಿದ್ದರು. ಸಿಂಧುವಾದ ಅಂಚೆ ಮತಗಳನ್ನೂ ಎಣಿಕೆ ಮಾಡುವಂತೆ ಜೀವರಾಜ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಮಧ್ಯ ರಾತ್ರಿವರೆಗೂ ಮರು ಎಣಿಕೆ ನಡೆದಾಗ ಅಂದು ಸಿಂಧುವಾಗಿದ್ದ ಮತಗಳಲ್ಲಿ ಭಾರಿ ಪ್ರಮಾಣದಲ್ಲಿ ‘ಅಸಿಂಧು’ ಮತಗಳು ಗೋಚರಿಸಿ ಡಿ. ಎನ್. ಜೀವರಾಜ್ ವಿಜಯದ ನಗೆ ಬೀರಿದ್ದಾರೆ.

ಈ ಫಲಿತಾಂಶ ಶಾಸಕ ರಾಜೇಗೌಡ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದು “ಮತಗಳನ್ನು ತಿದ್ದಲಾಗಿದೆ” ಎನ್ನುವ ಗಂಭೀರ ಆರೋಪ ಮಾಡಿದ್ದು ಮುಂದಿನ ನಡೆ ಕಾದು ನೋಡಬೇಕಾಗಿದೆ.

ಮತಗಳ ಎಣಿಕೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದ್ದು, ಅಂತಿಮವಾಗಿ ನ್ಯಾಯಾಲಯ ನೀಡುವ ತೀರ್ಪು ಆಧರಿಸಿ ರಾಜೇಗೌಡ ಮತ್ತು ಜೀವರಾಜ್ ಚುನಾವಣಾ ಭವಿಷ್ಯ ನಿರ್ಧಾರವಾಗಲಿದೆ.

ಅಸಿಂಧು 279 ಮತಗಳು ಎಣಿಕೆ ಅಂತಿಮ ಎಂದು ಬಹಳಷ್ಟು ಜನ ತಪ್ಪಾಗಿ ತಿಳಿದಿರುವುದೇ ಪ್ರಮಾದಕ್ಕೆಕಾರಣವಾಯಿತು.ವ್ಯಾಲಿಡ್ ಮತಗಳು ಎಣಿಕೆಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಇರುವುದು ಒಂದುಕಾರಣವಾಗಿತ್ತು.

2023 ರಲ್ಲಿಸಿಂಧುವಾಗಿರುವ ಮತಗಳು ಇಷ್ಟೊಂದು ಸಂಖ್ಯೆಯಲ್ಲಿವ್ಯತ್ಯಾಸ ಆಗುತ್ತದೆ ಎಂದುಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೂ ನಿರೀಕ್ಷಿಸಿರಲಿಲ್ಲ.

BJP candidate D. N. Jeevaraj wins in recount

Share

Leave a comment

Leave a Reply

Your email address will not be published. Required fields are marked *

Don't Miss

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು....

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ...

Related Articles

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ...

ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅವಶ್ಯಕ

ಚಿಕ್ಕಮಗಳೂರು: ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅತ್ಯವಶ್ಯಕ. ಈ ಹಾ ದಿಯಲ್ಲಿ ಪ್ರತಿಯೊಬ್ಬರು ಹೆಚ್ಚು ತೊಡಗಿಸಿಕೊಂಡು...

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ...

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ...