Home namma chikmagalur chikamagalur ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ
chikamagalurHomeLatest Newsnamma chikmagalur

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

Share
Share

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ ಸಾಧಿಸಿದ್ದಾರೆ.

2023 ರಲ್ಲಿ ನಡೆದ ಮತ ಎಣಿಕೆ ಯಲ್ಲಿ ಸಿಂಧುವಾಗಿದ್ದ 358 ಮತಗಳು 2026 ರ ಮರುಮತ ಎಣಿಕೆಯಲ್ಲಿ ಅಸಿಂಧು ಆಗುವ ಮೂಲಕ ಡಿ .ಎನ್ .ಜೀವರಾಜ್ 56 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಆ ಮೂಲಕ ಕಳೆದ ಮೂರು ವರ್ಷಗಳಿಂದ ನಡೆದ ಹಗ್ಗ ಜಗ್ಗಾಟದಲ್ಲಿ ಕಾಂಗ್ರೆಸ್ ಶಾಸಕ ರಾಜೇಗೌಡ ಸೋಲನ್ನು ಅನುಭವಿಸಿದ್ದಾರೆ.

ನ್ಯಾಯಾಲಯದ ಆದೇಶದ ಅನ್ವಯ ತಿರಸ್ಕೃತ ಅಂಚೆ ಮತಗಳ ಮರು ಎಣಿಕೆ ಸಂದರ್ಭದಲ್ಲಿ ಎರಡು ಹೆಚ್ಚುವರಿ ಮತಗಳನ್ನು ರಾಜೇಗೌಡ ಪಡೆದಿದ್ದರು. ಇದನ್ನೇ ಅಂತಿಮವೆಂದು ಪರಿಗಣಿಸಿದ ಕಾರ್ಯಕರ್ತರು/ಮುಖಂಡರು ವಿಜಯೋತ್ಸವ ಆಚರಿಸಿದ್ದರು. ಸಿಂಧುವಾದ ಅಂಚೆ ಮತಗಳನ್ನೂ ಎಣಿಕೆ ಮಾಡುವಂತೆ ಜೀವರಾಜ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಮಧ್ಯ ರಾತ್ರಿವರೆಗೂ ಮರು ಎಣಿಕೆ ನಡೆದಾಗ ಅಂದು ಸಿಂಧುವಾಗಿದ್ದ ಮತಗಳಲ್ಲಿ ಭಾರಿ ಪ್ರಮಾಣದಲ್ಲಿ ‘ಅಸಿಂಧು’ ಮತಗಳು ಗೋಚರಿಸಿ ಡಿ. ಎನ್. ಜೀವರಾಜ್ ವಿಜಯದ ನಗೆ ಬೀರಿದ್ದಾರೆ.

ಈ ಫಲಿತಾಂಶ ಶಾಸಕ ರಾಜೇಗೌಡ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದು “ಮತಗಳನ್ನು ತಿದ್ದಲಾಗಿದೆ” ಎನ್ನುವ ಗಂಭೀರ ಆರೋಪ ಮಾಡಿದ್ದು ಮುಂದಿನ ನಡೆ ಕಾದು ನೋಡಬೇಕಾಗಿದೆ.

ಮತಗಳ ಎಣಿಕೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದ್ದು, ಅಂತಿಮವಾಗಿ ನ್ಯಾಯಾಲಯ ನೀಡುವ ತೀರ್ಪು ಆಧರಿಸಿ ರಾಜೇಗೌಡ ಮತ್ತು ಜೀವರಾಜ್ ಚುನಾವಣಾ ಭವಿಷ್ಯ ನಿರ್ಧಾರವಾಗಲಿದೆ.

ಅಸಿಂಧು 279 ಮತಗಳು ಎಣಿಕೆ ಅಂತಿಮ ಎಂದು ಬಹಳಷ್ಟು ಜನ ತಪ್ಪಾಗಿ ತಿಳಿದಿರುವುದೇ ಪ್ರಮಾದಕ್ಕೆಕಾರಣವಾಯಿತು.ವ್ಯಾಲಿಡ್ ಮತಗಳು ಎಣಿಕೆಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಇರುವುದು ಒಂದುಕಾರಣವಾಗಿತ್ತು.

2023 ರಲ್ಲಿಸಿಂಧುವಾಗಿರುವ ಮತಗಳು ಇಷ್ಟೊಂದು ಸಂಖ್ಯೆಯಲ್ಲಿವ್ಯತ್ಯಾಸ ಆಗುತ್ತದೆ ಎಂದುಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೂ ನಿರೀಕ್ಷಿಸಿರಲಿಲ್ಲ.

BJP candidate D. N. Jeevaraj wins in recount

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...