Home ಬಿಹಾರದಲ್ಲಿ ಎನ್‌ಡಿಎಗೆ ಅಭೂತಪೂರ್ವ ಗೆಲುವು ಬಿಜೆಪಿ ಸಂಭ್ರಮಾಚರಣೆ
Home

ಬಿಹಾರದಲ್ಲಿ ಎನ್‌ಡಿಎಗೆ ಅಭೂತಪೂರ್ವ ಗೆಲುವು ಬಿಜೆಪಿ ಸಂಭ್ರಮಾಚರಣೆ

Share
Share

ಚಿಕ್ಕಮಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅತಿಹೆಚ್ಚು ಸ್ಥಾನ ಪಡೆದುಕೊಂಡು ಅಪೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಶುಕ್ರವಾರ ಜಿಲ್ಲಾ ಬಿಜೆ ಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಪರಸ್ಪರ ಸಿಹಿಹಂಚಿ ಸಂಭ್ರಮಾ ಚರಣೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ವಿ.ಪಕ್ಷದ ಮುಖಂಡರುಗಳು ಮತಗಳ್ಳತನ ಹಾಗೂ ಹಣದ ಆಮಿಷವನ್ನೇ ಹರಿಸಿದರೂ, ಕೊನೆಗೂ ಮತದಾರರು ಆಮಿಷಕ್ಕೆ ಒಳಗಾಗದೇ ಎನ್‌ಡಿಎಗೆ ಸಂಪೂರ್ಣವಾಗಿ ಬೆಂಬಲಿಸಿ ಗೆಲುವನ್ನು ತಂ ದುಕೊಟ್ಟಿದ್ದಾರೆ ಎಂದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ದೇಶದ ವಿವಿಧ ರಾಜ್ಯಗಳಲ್ಲಿ ಚು ನಾವಣೆಗಳಲ್ಲಿ ಭಾಗಿಯಾಗಿ ನೂರರ ಗೆಲುವು ಸಾಧಿಸಿದೆ. ಆದರೆ ರಾಹುಲ್‌ಗಾಂಧಿ ನೇತೃತ್ವದ ನಡೆದ ಚುನಾ ವಣೆಗಳಲ್ಲಿ ಸಂಪೂರ್ಣವಾಗಿ ಠೇವಣಿ ಕಳೆದುಕೊಂಡು ಸತತ ನೂರನೇ ಸೋಲಿಗೆ ಕಾರಣವಾಗಿದೆ ಎಂದು ಟೀಕಿಸಿದರು.

ಇವಿಎಂ ಹ್ಯಾಕ್, ಮತಗಳ್ಳತನ ಎಂಬ ಸುಳ್ಳು ಸುದ್ದಿ ಹರಡುವ ಮೂಲಕವೇ ಜನರನ್ನು ದಿಕ್ಕುತಪ್ಪಿಸಲು ಯತ್ನಿಸಿದ ವಿ.ಪಕ್ಷದ ನಾಯಕರಿಗೆ ಬಿಹಾರ ರಾಜ್ಯದ ಮತದಾರರು ಎನ್‌ಡಿಗೆ ಬೆಂಬಲಿಸಿ ತಕ್ಕಉತ್ತರ ನೀಡಿ ದೆ. ಈ ತೀರ್ಪನ್ನು ಕಾಂಗ್ರೆಸ್ ಎಚ್ಚೆತ್ತುಕೊಂಡು ಜನಸಾಮಾನ್ಯರ ನಡುವೆ ಅನುಕೂಲವಾಗುವ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.

ಬಿಹಾರ ಚುನಾವಣೆಯಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡ, ಗೃಹ ಸಚಿವ ಅಮತ್‌ಶಾ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿ ಗೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ತುಂಬು ಹೃದಯ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ ಮಾತನಾಡಿ ಕೇಂದ್ರದ ಮೋದಿ ಸರ್ಕಾರ ಹಾಗೂ ಬಿಹಾರ ಮುಖ್ಯ ಮಂತ್ರಿ ನಿತೀಶ್‌ಕುಮಾರ್ ಸಾಧನೆಗಳೇ, ಈ ಬಾರಿಯ ವಿಧಾನಸಭಾ ಚುನಾವಣೆಗಳಲ್ಲಿ ಅತ್ಯಧಿಕ ಸ್ಥಾನ ಗಳಿ ಸಲು ಸಾಧ್ಯವಾಗಿದ್ದು, ಮುಂದೆ ಕರ್ನಾಟಕದಲ್ಲೂ ಜನತೆ ದೊಡ್ಡ ಬದಲಾವಣೆ ತಂದು ಬಿಜೆಪಿ ಗೆಲುವಿಗ ದೊಡ್ಡ ಕ್ರಾಂತಿಯನ್ನು ಮಾಡಲಿದ್ದಾರೆ ಎಂದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ ಎನ್‌ಡಿಎ ನೇತೃತ್ವದ ಪಕ್ಷ ದೇಶದ ಎಲ್ಲಾ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರಗೊಳಿ ಸುತ್ತಿದೆ. ಇದಕ್ಕೆ ಅಂದಿನ ಸರ್ಕಾರದಲ್ಲಿ ನಡೆದ ದುರಾಡಳಿತವೇ ನೇರ ಕಾರಣವಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಖಜಾಂಚಿ ನಾರಾಯಣಗೌಡ, ವಕ್ತಾರ ಪುಟ್ಟಸ್ವಾಮಿ, ಕಾರ್ಯದರ್ಶಿ ಅರುಣ್, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್‌ಗೌಡ, ಓಬಿಸಿ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ನಗರಾಧ್ಯಕ್ಷ ಜೀವನ್, ಮಾದ್ಯಮ ಪ್ರಮುಖ್ ದಿನೇಶ್, ಮುಖಂಡರುಗಳಾದ ಹಂಪಯ್ಯ, ಕೌಶಿಕ್, ಹೆಚ್.ಕೆ.ಕೇಶವಮೂರ್ತಿ, ರೇವನಾಥ್, ಸೋಮಶೇಖರ್, ಸೀತರಾಮಭರಣ್ಯ ಇದ್ದರು.

BJP celebrates unprecedented victory for NDA in Bihar

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...