Home namma chikmagalur ajjampura ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ
ajjampuraCrime NewsHomeLatest Newsnamma chikmagalur

ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ

Share
Share

ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಅಜ್ಜಂಪುರ ಪಟ್ಟಣದಲ್ಲಿ ಕೇಳಿಬಂದಿದೆ.

ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಜ್ಜಂಪುರ ನಿವಾಸಿ ಮಹಮದ್ ಜೈದ್ ಎಂಬ ಯುವಕ ಹಲ್ಲೆಗೆ ಒಳಗಾಗಿದ್ದು, ಕೈ ಮುರಿತ ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸೋಮವಾರ ಸಂಜೆ ತಮ್ಮನನ್ನು ಶಾಲೆಯಿಂದ ಕರೆತರಲು ಸ್ಕೂಟಿಯಲ್ಲಿ ತೆರಳಿದ್ದ ಜೈದ್, ಶಾಲೆ ಬಿಡುವ ಸಮಯವಾಗದ ಕಾರಣ ಕೆಲ ಬಾರಿ ಶಾಲೆಯ ಸುತ್ತಮುತ್ತ ಓಡಾಡಿದ್ದಾನೆ ಎನ್ನಲಾಗಿದೆ.

ಈ ವೇಳೆ “ಬೈಕ್ ಅನ್ನು ವೇಗವಾಗಿ ಓಡಿಸುತ್ತೀಯಾ” ಎಂಬ ವಿಚಾರವಾಗಿ ಮಾತಿನ ಚಕಮಕಿ ಆರಂಭವಾಗಿ, ಬಳಿಕ ಬಿಜೆಪಿ ಮುಖಂಡ ಸಂತೋಷ್ ಮಾಳೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಜೈದ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಸುದ್ದಿ ಹರಡುತ್ತಿದ್ದಂತೆ ನೂರಾರು ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಅಜ್ಜಂಪುರ ಪೊಲೀಸ್ ಠಾಣೆ ಬಳಿ ಜಮಾಯಿಸಿ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ತಡರಾತ್ರಿವರೆಗೂ ಠಾಣೆ ಆವರಣದಲ್ಲಿ ಜನರು ನೆರೆದಿದ್ದರು.

ಆರೋಪಿತ ಸಂತೋಷ್ ಮಾಳೆ ವಿರುದ್ಧ ಅಜ್ಜಂಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

BJP leader attacks youth with rod

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...