Home Political News ಸಿ.ಟಿ ರವಿ ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ
Political News

ಸಿ.ಟಿ ರವಿ ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ

Share
Share

ಚಿಕ್ಕಮಗಳೂರು : ಹೈಕೋರ್ಟ್ ಜಾಮೀನು ಪಡೆದ ನಂತರ ತವರು ಜಿಲ್ಲೆಗೆ ಆಗಮಿಸುತ್ತಿರುವ ಸಿ.ಟಿ ರವಿಗೆ ಅದ್ಧೂರಿ ಸ್ವಾಗತ ಕೋರಲು ಬಿಜೆಪಿ ತಯಾರಿ ಮಾಡಿಕೊಂಡಿದೆ,
ಬಿಜೆಪಿ ಜಿಲ್ಲಾ ಘಟಕದಿಂದ ಭರ್ಜರಿ ಸ್ವಾಗತ ಕೋರಲು ಕಾರ್ಯಕರ್ತರು ಸಜ್ಜುಗೊಂಡಿದ್ದಾರೆ.

ಹೈಕೋರ್ಟ್‌ ಆದೇಶದ್ವನಯ ಪೊಲೀಸರಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ
ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸ್ವಾಗತಕ್ಕೆ ಕಾರ್ಯಕರ್ತರು ರೆಡಿ ಆಗಿದ್ದಾರೆ, ಗಡಿಭಾಗ ಮಾಗಡಿ ಹ್ಯಾಂಡ್ ಪೋಸ್ಟ್ ನಿಂದ ನಗರಕ್ಕೆ ಎಂಟ್ರಿ ಕೊಡುವ ಮಾರ್ಗದಲ್ಲಿ ಸ್ವಾಗತಕ್ಕೆ ತಯಾರಿ ಮಾಡಿಕೊಳ್ಳ ಲಾಗುತ್ತಿದೆ, ನಗರದಿಂದ 10 ಕಿ.ಮೀ. ದೂರದ ಮಾಗಡಿ ಹ್ಯಾಂಡ್ ಪೋಸ್ಟ್ ನಿಂದಲೇ ಸ್ವಾಗತ ಮಾಡಲಿದ್ದಾರೆ ಕಾರ್ಯಕರ್ತ ಪಡೆ,

ನಗರದ ಹಿರೇಮಗಳೂರಿನಿಂದ ಓಪನ್ ಜೀಪ್ ನಲ್ಲಿ ಸಿ.ಟಿ ರವಿ ಮನೆಗೆವರೆಗೂ ರೋಡ್ ಶೋ ಸಾಗಲಿದೆ, ಸುಮಾರು 4 ಕಿ.ಮೀ. ಓಪನ್ ಜೀಪ್ ನಲ್ಲಿ ಮೆರವಣಿಗೆ ಮೂಲಕ ಕರೆತರಲು ಪ್ಲಾನ್ ಮಾಡಿಕೊಂಡಿದ್ದಾರೆ. ಜೊತೆಗೆ ಕಾರ್ಯಕರ್ತರು ಬೈಕ್, ಕಾರುಗಳ ಮೂಲಕ ಕರೆತರಲು ಪ್ಲಾನ್ ಮಾಡಿದ್ದಾರೆ. ರಾತ್ರಿ 10 ಗಂಟೆಗೆ ಚಿಕ್ಕಮಗಳೂರು ಗಡಿಗೆ ರವಿ ಆಗಮಿಸಲಿದ್ದು, ಭವ್ಯ‌ ಸ್ವಾಗತದ ಮೂಲಕ ಕರೆತರಲು ಬಿಜೆಪಿ ಸಿದ್ಧತೆ ನಡೆಸಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...