Home Political News ಸಿ.ಟಿ ರವಿ ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ
Political News

ಸಿ.ಟಿ ರವಿ ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ

Share
Share

ಚಿಕ್ಕಮಗಳೂರು : ಹೈಕೋರ್ಟ್ ಜಾಮೀನು ಪಡೆದ ನಂತರ ತವರು ಜಿಲ್ಲೆಗೆ ಆಗಮಿಸುತ್ತಿರುವ ಸಿ.ಟಿ ರವಿಗೆ ಅದ್ಧೂರಿ ಸ್ವಾಗತ ಕೋರಲು ಬಿಜೆಪಿ ತಯಾರಿ ಮಾಡಿಕೊಂಡಿದೆ,
ಬಿಜೆಪಿ ಜಿಲ್ಲಾ ಘಟಕದಿಂದ ಭರ್ಜರಿ ಸ್ವಾಗತ ಕೋರಲು ಕಾರ್ಯಕರ್ತರು ಸಜ್ಜುಗೊಂಡಿದ್ದಾರೆ.

ಹೈಕೋರ್ಟ್‌ ಆದೇಶದ್ವನಯ ಪೊಲೀಸರಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ
ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸ್ವಾಗತಕ್ಕೆ ಕಾರ್ಯಕರ್ತರು ರೆಡಿ ಆಗಿದ್ದಾರೆ, ಗಡಿಭಾಗ ಮಾಗಡಿ ಹ್ಯಾಂಡ್ ಪೋಸ್ಟ್ ನಿಂದ ನಗರಕ್ಕೆ ಎಂಟ್ರಿ ಕೊಡುವ ಮಾರ್ಗದಲ್ಲಿ ಸ್ವಾಗತಕ್ಕೆ ತಯಾರಿ ಮಾಡಿಕೊಳ್ಳ ಲಾಗುತ್ತಿದೆ, ನಗರದಿಂದ 10 ಕಿ.ಮೀ. ದೂರದ ಮಾಗಡಿ ಹ್ಯಾಂಡ್ ಪೋಸ್ಟ್ ನಿಂದಲೇ ಸ್ವಾಗತ ಮಾಡಲಿದ್ದಾರೆ ಕಾರ್ಯಕರ್ತ ಪಡೆ,

ನಗರದ ಹಿರೇಮಗಳೂರಿನಿಂದ ಓಪನ್ ಜೀಪ್ ನಲ್ಲಿ ಸಿ.ಟಿ ರವಿ ಮನೆಗೆವರೆಗೂ ರೋಡ್ ಶೋ ಸಾಗಲಿದೆ, ಸುಮಾರು 4 ಕಿ.ಮೀ. ಓಪನ್ ಜೀಪ್ ನಲ್ಲಿ ಮೆರವಣಿಗೆ ಮೂಲಕ ಕರೆತರಲು ಪ್ಲಾನ್ ಮಾಡಿಕೊಂಡಿದ್ದಾರೆ. ಜೊತೆಗೆ ಕಾರ್ಯಕರ್ತರು ಬೈಕ್, ಕಾರುಗಳ ಮೂಲಕ ಕರೆತರಲು ಪ್ಲಾನ್ ಮಾಡಿದ್ದಾರೆ. ರಾತ್ರಿ 10 ಗಂಟೆಗೆ ಚಿಕ್ಕಮಗಳೂರು ಗಡಿಗೆ ರವಿ ಆಗಮಿಸಲಿದ್ದು, ಭವ್ಯ‌ ಸ್ವಾಗತದ ಮೂಲಕ ಕರೆತರಲು ಬಿಜೆಪಿ ಸಿದ್ಧತೆ ನಡೆಸಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...