Home Political News ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
Political News

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Share
Share

ಚಿಕ್ಕಮಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರು, ಶಿಶುಗಳ ಸರಣಿ ಸಾವು ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ನಿರ್ಲಕ್ಷ ವಿರೋಧಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಪಾಂಚಜನ್ಯ ಕಚೇರಿಯಿಂದ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಆಜಾದ್ ಪಾರ್ಕ್ ವೃತದಲ್ಲಿ ಪ್ರತಿಭಟನೆ ನಡೆಸಿದರು. ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ರಾಜ್ಯ ಸರ್ಕಾರ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಗರ್ಭಿಣಿ ಸ್ತ್ರೀಯರ ಆರೈಕೆಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಕೇಂದ್ರದಿಂದ ನೀಡುವ ವಿವಿಧ ಯೋಜನೆಗಳು ಗರ್ಭಿಣಿಯರಿಗೆ ತಲುಪುತ್ತಿಲ್ಲ ಇದಕ್ಕೆಲ್ಲ ಮುಖ್ಯ ಕಾರಣ ರಾಜ್ಯ ಸರ್ಕಾರದ ನಿರ್ಲಕ್ಷ, ಮಾತೃ ವಂದನಾ ಯೋಜನೆಯ ಹಣ ತಲುಪಿಸುವುದರಲ್ಲಿ ರಾಜ್ಯ ಸರ್ಕಾರದ ಎರಡು ಇಲಾಖೆಗಳು ವಿಫಲವಾಗಿದೆ ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಲಾಯಿತು.

ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರ್ಕಾರದ ಬೇಜವಾಬ್ದಾರಿತನದಿಂದ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿಗಳ ಕೊರತೆಯಿಂದಾಗಿ ಪಿ ಎಚ್ ಸಿ ಗಳು ಸೊರಗುತ್ತಿವೆ. ಅಂಬುಲೆನ್ಸ್ ಗಳಿಗೆ ಸರಿಯಾಗಿ ಇಂಧನ ಸಿಗುತ್ತಿಲ್ಲ. ಹಾಗೂ ಸಿಬ್ಬಂದಿ ವರ್ಗಗಳಿಗೂ ಸರ್ಕಾರ ಸಂಬಳ ನೀಡುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ಬ್ಲಡ್ ಬ್ಯಾಂಕ್ ಗಳ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರ ಈ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಮೇಲ್ದರ್ಜೆಗೇರಿಸಬೇಕೆಂದು ಇದೇ ವೇಳೆ ಪ್ರತಿಭಟನಾಕಾರರು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...