Home Political News ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ಬಿಎಲ್ ಶಂಕರ್ ನೇಮಿಸಿ ರಾಜ್ಯ ಸರ್ಕಾರ ಆದೇಶ
Political News

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ಬಿಎಲ್ ಶಂಕರ್ ನೇಮಿಸಿ ರಾಜ್ಯ ಸರ್ಕಾರ ಆದೇಶ

Share
Share

ಚಿಕ್ಕಮಗಳೂರು : ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ ಬಿ.ಎಲ್.ಶಂಕರ್ ರವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಬಿ.ಎಲ್.ಶಂಕರ್ ಕಿರಿಯ ವಯಸ್ಸಿನಲ್ಲಿ ಜನತಾ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಇಪ್ಪತೈದನೇ ವಯಸ್ಸಿನಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಯುವಜನ ಸೇವಾ ಮಂತ್ರಿ ಯಾದವರು. ಉತ್ತಮ ವಾಗ್ಮಿ, ಬದ್ದತೆ ಇಟ್ಟುಕೊಂಡು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾನಸ ಪುತ್ರ ಎಂದು ಬಿಂಬಿತರಾದವರು ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಚುನಾಯಿತರಾಗಿದ್ದು ಬಿಟ್ಟರೆ ಸ್ಪರ್ಧೆ ಮಾಡಿದ ಚುನಾವಣೆ ಯಲ್ಲಿ ಸೋತ ದಾಖಲೆಯೇ ಹೆಚ್ಚು.
ಜೆ.ಹೆಚ್.ಪಟೇಲರು ಮಾತ್ರ ಬೆಳಿಗ್ಗೆ ವಿಧಾನ ಪರಿಷತ್ ಸದಸ್ಯರಾಗಿ ಮಾಡಿ ಸಂಜೆ ಮಂತ್ರಿ ಮಾಡಿದ್ದು ದಾಖಲೆ. ನಂತರ ವಿಧಾನ ಪರಿಷತ್ ಸಭಾಪತಿಯಾಗಿದ್ದರು.

ಕಳೆದ ಇಪ್ಪತ್ತು ವರ್ಷಗಳಿಂದ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ನಿರಂತರ ಸೇವೆಯ ಜೊತೆಗೆ ಜಿಲ್ಲಾ ರಾಜಕಾರಣದಲ್ಲಿ ಕೈ ಆಡಿಸುವುದರ ಜೊತೆಗೆ ಅವರು ರಾಜಕೀಯವಾಗಿ ಏನು ? ಏಕೆ ಎಂಬಂತೆ ಆಗಿದ್ದಾರೆ.
ಈ ಸಾರಿ ಎಮ್.ಎಲ್.ಸಿ ಗ್ಯಾರಂಟಿ ಆಯ್ಯೋ ರಾಜ್ಯಸಭೆಗೆ ಹೋಗೆ ಹೋಗುತ್ತಾರೆ ಎನ್ನುವವರು ಕಾಯುತ್ತಾ ಇದ್ದಾರೆ. ಈಗ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿರುವುದು ಮತ್ತೇನು ಕೇಳಬೇಡಿ ಎಂಬುದರ ಸಿಗ್ನಲ್ ಎಂದು ಡಿ.ಕೆ.ಸಿ ಕಡೆಯವರು ವಾದಿಸುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...