Home namma chikmagalur ರುದ್ರಪಾದ ಗ್ರಾಮದ ಬಳಿ ನದಿಯಲ್ಲಿ ಯುವಕ ಶವ ಪತ್ತೆ
namma chikmagalurCrime NewsHomeLatest News

ರುದ್ರಪಾದ ಗ್ರಾಮದ ಬಳಿ ನದಿಯಲ್ಲಿ ಯುವಕ ಶವ ಪತ್ತೆ

Share
Share

ಚಿಕ್ಕಮಗಳೂರು:  ಭದ್ರಾ ನದಿಯಲ್ಲಿ ಸಾಲು ಸಾಲು ಅನಾಹುತಗಳ ಸರಣಿಗೆ ಕಾರಣವಾಗುತ್ತಿದೆ. ಒಂದೇ ವಾರದ ಅಂತರದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಇಬ್ಬರು ಯುವಕರು ಸೇರಿ ನಾಲ್ಕು ಮೃತದೇಹ ಪತ್ತೆಯಾಗಿದೆ.

ಮೂರ್ನಾಲ್ಕು ದಿನಗಳ ದಿನಗಳ ಹಿಂದೆ ಅದೇ ಭದ್ರಾ ನದಿಯಲ್ಲಿ 10ನೇ ತರಗತಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ವಾರದ ಹಿಂದೆ ಇದೇ ನದಿಯಲ್ಲಿ ರಾಜಸ್ಥಾನದ ಇಬ್ಬರು ಸಾವನ್ನಪ್ಪಿರು. ಇಂದು ಮತ್ತದೇ ಭದ್ರಾ ನದಿಯಲ್ಲಿ 33 ವರ್ಷದ ಸುಹಾನ್ ಎಂಬ ಯುವಕನ ಶವ ಕೂಡ ಪತ್ತೆಯಾಗಿದೆ.

ಕಳಸ ತಾಲೂಕಿನ ರುದ್ರಪಾದ ಗ್ರಾಮದ ಬಳಿ ನದಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಕಳಸ ಠಾಣೆಯ ಪೊಲೀಸರಿಗೆ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಬಂದ ಶೌರ್ಯ ವಿಪತ್ತು ಸದಸ್ಯರು ಹಾಗೂ ಕಳಸ ಪೊಲೀಸರು ಮೃತದೇಹವನ್ನು ಮೇಲೆತ್ತಿದಾಗ ಮೃತ ಯುವಕ ಮೂಡಿಗೆರೆ ತಾಲೂಕಿನ ಬಣಕಲ್ ನಿವಾಸಿ ಸುಹಾಸ್ (33) ಎಂದು ತಿಳಿದು ಬಂದಿದೆ.

ಸುಹಾಸ್ ನಾಪತ್ತೆಯಾಗಿರುವ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ಬಳಿಕ ಈತನ ಮೊಬೈಲ್ ಕಳಸ ಟವರ್ ವ್ಯಾಪ್ತಿಯಲ್ಲಿ ಸ್ವೀಚ್ ಆಫ್ ಆಗಿತ್ತು. ಇದೀಗ ಯುವಕ ಸುಹಾಸ್ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಭದ್ರಾನದಿಯಲ್ಲಿ ಪತ್ತೆಯಾದ ಸುಹಾಸ್ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ.ಆತ್ಮಹತ್ಯೆಯೋ ಅಥವ ಕೊಲೆಯೋ ಎಂಬ ಅನುಮಾನ ಉಂಟಾಗಿದೆ.

ಕಳೆದ ವಾರ ಕೂಡ ಭದ್ರಾ ನದಿಯ ವಸಿಷ್ಠ ತೀರ್ಥದಲ್ಲಿ ರಾಜಸ್ಥಾನ್ ಮೂಲದ ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಅಲ್ಲದೇ ಐದು ದಿನದ ಹಿಂದಷ್ಟೇ ಇದೇ ಭದ್ರಾ ನದಿಯಲ್ಲಿ ಶ್ರೇಯಸ್ ಎಂಬ 10ನೇ ತರಗತಿ ವಿದ್ಯಾರ್ಥಿಯ ಶವವೂ ಪತ್ತೆಯಾಗಿತ್ತು.

ಒಂದು ವಾರದ ಅಂತರದಲ್ಲಿ ಇಬ್ಬರು ಮುಳುಗಿ ಜೀವ ಕಳೆದು ಕೊಂಡರೆ, ಮತ್ತಿಬ್ಬರು ಅನುಮಾನಸ್ಪದವಾಗಿ ಭದ್ರಾ ನದಿಯಲ್ಲಿ ಶವಗಳು ಪತ್ತೆಯಾಗಿರುವುದು ಸ್ಥಳೀಯರನ್ನ ಬೆಚ್ಚಿ ಬೀಳಿಸಿದೆ. ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭವಾಗಿದೆ.

Body of a young man found in a river near Rudrapada village

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ...

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ...

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ...