Home namma chikmagalur chikamagalur ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 
chikamagalurCrime NewsHomeLatest Newsnamma chikmagalur

ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 

Share
Share
ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಅರಣ್ಯ ಪ್ರದೇಶದಲ್ಲಿ ಸುಮಾರು 65 ರಿಂದ 70 ವರ್ಷದೊಳಗಿನ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ.
ಕಳೆದ ಮೂರು–ನಾಲ್ಕು ದಿನಗಳಿಂದ ರಸ್ತೆ ಬದಿಯ ಅಂಗಡಿಗಳ ಬಳಿ ಈ ವೃದ್ಧ ಅಲೆದಾಡುತ್ತಿದ್ದು, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ. ಊರು ಯಾವುದು ಎಂದು ಕೇಳಿದಾಗ “ಮಂಡ್ಯ” ಎಂದು ಹೇಳುತ್ತಿದ್ದನೆಂದು ಅಂಗಡಿ ಯುವಕರು ಮಾಹಿತಿ ನೀಡಿದ್ದಾರೆ.
ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಸ್ಥಳದ ಬಳಿ ಬೇಲಿ ನಿರ್ಮಾಣ ಕಾರ್ಯ ನಡೆಸುತ್ತಿದ್ದ ಸ್ಥಳೀಯರು ಅರಣ್ಯದ ಒಳಭಾಗದಲ್ಲಿ ಶವವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ದಿಲೀಪ್ ಕುಮಾರ್ ಪರಿಶೀಲನೆ ನಡೆಸಿದರು.
ಪ್ರಾಥಮಿಕ ತನಿಖೆಯಲ್ಲಿ ಮೃತದೇಹದ ಮೇಲೆ ಯಾವುದೇ ಹಲ್ಲೆ ಅಥವಾ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಸಮಾಜ ಸೇವಕ ಆರಿಫ್ ಅವರ ಆಂಬುಲೆನ್ಸ್ ಮೂಲಕ ಶವವನ್ನು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಹಾಗೂ ಗುರುತು ಪತ್ತೆ ಕಾರ್ಯ ಕೈಗೊಳ್ಳಲಾಗಿದೆ.
ಈ ನಡುವೆ, ಅರಣ್ಯದ ಒಳಭಾಗದಿಂದ ರಸ್ತೆವರೆಗೆ ಶವವನ್ನು ಸ್ವತಃ ಹೊತ್ತು ತಂದ ಪಿಎಸ್ಐ ದಿಲೀಪ್ ಕುಮಾರ್ ಅವರ ಮಾನವೀಯ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಕುರಿತು ಬಣಕಲ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Body of unidentified elderly man found in forest
Share

Leave a comment

Leave a Reply

Your email address will not be published. Required fields are marked *

Don't Miss

ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಮತ್ತೆ ಶಾಸಕರಾಗಿ ಮುಂದುವರಿಕೆ

ನವದೆಹಲಿ:  ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ...

ರಾಜೇಗೌಡರಿಗೆ ರಾಜಕೀಯ ಮೈಲೇಜ್ – ಜೀವರಾಜ್ ಗೆ ಕೊನೆ ಮೊಳೆ ?

ಶೃಂಗೇರಿ: ಕಳೆದ ಹತ್ತು ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ” ಶಾಸಕತ್ವ” ದ ಬಗ್ಗೆ ಎರಡು ಪಕ್ಷದವರಿಂದ ಪಟಾಕಿ,ಮೆರವಣಿಗೆ, ವಿಜಯೋತ್ಸವ ಸಾಲು ಸಾಲಾಗಿ ನಡೆಸಿ ರಾಜಕೀಯ ಜಿದ್ದಾ ಜಿದ್ದಿಗೆ ಈಗ...

Related Articles

ಭಾರತದ ಹಿಂದು ಸಂಸ್ಕೃತಿಗೆ ಮುಂಡಾಲ ಸಮಾಜದ ಕೊಡುಗೆ ಅಪಾರ

ಚಿಕ್ಕಮಗಳೂರು: ಭಾರತದ ಹಿಂದು ಸಂಸ್ಕೃತಿಗೆ ಮುಂಡಾಲ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಕಚ್ಚೂರು ಕ್ಷೇತ್ರದ ಧರ್ಮದರ್ಶಿ...

ರೈತರ ತೋಟ-ಜಮೀನುಗಳಿಂದ ಮೋಟಾರ್ ಕಳ್ಳತನ

ಚಿಕ್ಕಮಗಳೂರು: ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ರೈತರ ತೋಟ ಹಾಗೂ ಜಮೀನುಗಳಿಂದ ಮೋಟಾರ್,ಸ್ಟಾರ್ಟರ್ ಬಾಕ್ಸ್ ಮತ್ತು...

ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

ಚಿಕ್ಕಮಗಳೂರು:  ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸಾವಪ್ಪಿದ್ದಾರೆ. ಶಾರದಾ ಎಂಬುವರ ಮಗ ಪ್ರದೀಪ್...

ಮರಗಸಿ ಕೆಲಸ ಮಾಡುವಾಗ ಬಿದ್ದು ಕಾರ್ಮಿಕ ಸಾವು

ಚಿಕ್ಕಮಗಳೂರು: ಮರಗಸಿ ಕೆಲಸ ಮಾಡುವಾಗ 25 ಅಡಿ ಎತ್ತರದಿಂದ ಬಿದ್ದು ಕಾರ್ಮಿಕನೊಬ್ಬ ಅಂತ್ಯ ಕಂಡಿರುವ ಘಟನೆ...