Home namma chikmagalur Kadur ಬೊಲೆರೋ ಪಿಕಪ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು
KadurLatest Newsnamma chikmagalur

ಬೊಲೆರೋ ಪಿಕಪ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

Share
Share

ಸಕ್ಕರಾಯಪಟ್ಟಣ: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬೊಲೆರೋ ಪಿಕಪ್ ವಾಹನವು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹಿಂಬದಿ ಸವಾರನಾಗಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಕ್ಕರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಪಿಳ್ಳೆನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-173ರಲ್ಲಿ ಸೆ.3ರಂದು ರಾತ್ರಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಯರಜರ್ವಿ ಗ್ರಾಮದ ಮರೆಪ್ಪ ಪೂಜೇರ (ವಯಸ್ಸು ಲಭ್ಯವಿಲ್ಲ) ಮೃತಪಟ್ಟವರು. ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಹನುಮಪ್ಪ ಗುಡ್ಡಪ್ಪ ಉದಗಟ್ಟಿ (42) ಗಾಯಗೊಂಡಿದ್ದು, ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಮರೆಪ್ಪ ಪೂಜೇರ ಅವರು ಕುರಿ ಕಾಯುವ ವೃತ್ತಿ ಮಾಡಿಕೊಂಡು, ಊರೂರು ಸುತ್ತಾಡುತ್ತಾ ಕುರಿಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಸೆ.3ರಂದು ಕಡೂರು ತಾಲೂಕು ಸಕ್ಕರಾಯಪಟ್ಟಣ ಹೋಬಳಿಯ ಪಿಳ್ಳೆನಹಳ್ಳಿ ಗ್ರಾಮದ ತೋಟವೊಂದರಲ್ಲಿ ಕುರಿ ಮಂದೆಯನ್ನು ಬಿಟ್ಟು ಕುರಿ ಕಾಯುವ ಕೆಲಸ ಮಾಡುತ್ತಿದ್ದರು.

ಅಂದು ರಾತ್ರಿ ಸುಮಾರು 9.30ರ ವೇಳೆಗೆ ಮರೆಪ್ಪ ಅವರೊಂದಿಗೆ ಕುರಿ ಮೇಯಿಸುತ್ತಿದ್ದ ರಾಯಪ್ಪ ಎಂಬುವರು ಮೃತರ ಪತ್ನಿ ಲಕ್ಷ್ಮಿ ಮರೆಪ್ಪ ಪೂಜೇರ ಅವರಿಗೆ ಕರೆ ಮಾಡಿ ಅಪಘಾತದ ವಿಷಯ ತಿಳಿಸಿದ್ದಾರೆ.

ದೂರಿನ ಪ್ರಕಾರ, ಮರೆಪ್ಪ ಪೂಜೇರ ಹಾಗೂ ಅವರ ಸ್ನೇಹಿತ ಹನುಮಪ್ಪ ಗುಡ್ಡಪ್ಪ ಉದಗಟ್ಟಿ ಅವರು ದಿನಸಿ ಸಾಮಗ್ರಿಗಳನ್ನು ಖರೀದಿಸಲು ಪಿಳ್ಳೆನಹಳ್ಳಿಯಿಂದ ಉದ್ದೇಬೋರನಹಳ್ಳಿಗೆ KA-23 HB-4485 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಹನುಮಪ್ಪ ಬೈಕ್ ಚಲಾಯಿಸುತ್ತಿದ್ದು, ಮರೆಪ್ಪ ಹಿಂಬದಿ ಸವಾರರಾಗಿದ್ದರು.

ದಿನಸಿ ಸಾಮಗ್ರಿಗಳನ್ನು ಖರೀದಿಸಿಕೊಂಡು ಉದ್ದೇಬೋರನಹಳ್ಳಿಯಿಂದ ಪಿಳ್ಳೆನಹಳ್ಳಿ ಗ್ರಾಮದ ತೋಟದ ಕಡೆಗೆ ಹಿಂದಿರುಗುತ್ತಿದ್ದಾಗ ಸಕ್ಕರಾಯಪಟ್ಟಣದಿಂದ ಸ್ವಲ್ಪ ದೂರದಲ್ಲಿರುವ ಸಕ್ಕರಾಯ ಹೋಟೆಲ್ ಸಮೀಪ NH-173ರಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

ಈ ವೇಳೆ ಚಿಕ್ಕಮಗಳೂರು ಕಡೆಯಿಂದ ಬಂದ KA-35 D-1342 ಸಂಖ್ಯೆಯ ಮಹಿಂದ್ರಾ ಬೊಲೆರೋ ಪಿಕಪ್ ವಾಹನದ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಹನುಮಪ್ಪ ಹಾಗೂ ಮರೆಪ್ಪ ಇಬ್ಬರೂ ರಸ್ತೆಗೆ ಬಿದ್ದಿದ್ದು, ಮರೆಪ್ಪ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಅಧಿಕ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹನುಮಪ್ಪ ಅವರ ಸೊಂಟ, ಮುಖ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ.

ಅಪಘಾತದ ಬಳಿಕ ಬೊಲೆರೋ ಪಿಕಪ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಅದರ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳು ಹನುಮಪ್ಪ ಹಾಗೂ ಮೃತ ಮರೆಪ್ಪ ಅವರನ್ನು ಆಂಬುಲೆನ್ಸ್ ಮೂಲಕ ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಸಲಹೆಯಂತೆ ಮರೆಪ್ಪ ಅವರ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಯಿತು.

ಮೃತರ ಪತ್ನಿ ಲಕ್ಷ್ಮಿ ಅವರು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಪತಿಯ ಮೃತದೇಹವನ್ನು ವೀಕ್ಷಿಸಿದ ಬಳಿಕ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣನಾದ KA-35 D-1342 ಸಂಖ್ಯೆಯ ಬೊಲೆರೋ ಪಿಕಪ್ ವಾಹನದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇಲೆ ಸಕ್ಕರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Bolero pickup collides with bike: Bike rider dies

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...