Home Latest News ಬಾಳೆಹೊನ್ನೂರು ಮಠಕ್ಕೆ ರೊಬೋ ಆನೆ ಕೊಡುಗೆ ಕೊಟ್ಟ ಶಿಲ್ಪ ಶೆಟ್ಟಿ
Latest News

ಬಾಳೆಹೊನ್ನೂರು ಮಠಕ್ಕೆ ರೊಬೋ ಆನೆ ಕೊಡುಗೆ ಕೊಟ್ಟ ಶಿಲ್ಪ ಶೆಟ್ಟಿ

Share
Share

ಚಿಕ್ಕಮಗಳೂರು : ಮೂಲತಃ ಕನ್ನಡಿಗರೇ ಆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಬಾಳೆಹೊನ್ನೂರಿನ ಭದ್ರಾನದಿ ತಟದಲ್ಲಿರುವ ರಂಭಾಪುರಿ ಮಠಕ್ಕೆ ಜೀವಂತ ಆನೆಯನ್ನು ನಾಚಿಸುವಂತಹಾ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸುವ ಮೂಲಕ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ.

ನೋಡಲು ಥೇಟ್ ನಿಜವಾದ ಆನೆಯಂತೆ ಕಾಣುವ ಈ ರೋಬೋಟಿಕ್ ಎಲಿಫೆಂಟ್ ಸದಾ ಮಠದ ಆವರಣದಲ್ಲೇ ಇದ್ದು ಭಕ್ತರನ್ನ ಆಶೀರ್ವದಿಸಲಿದೆ. ಈ ರೋಬೋಟಿಕ್ ಆನೆ ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಳುಗಾಡಿಸುತ್ತಿರವ ಆನೆಯನ್ನ ನೋಡಿದರೆ ನಿಜವಾದ ಆನೆ ಕೂಡ ಒಂದು ಕ್ಷಣ ವಿಚಲಿತಗೊಳ್ಳಲಿದ್ದು, ನೋಡಿದ ಕೂಡಲೇ ನಿಜವಾದ ಆನೆ ಎಂದೇ ಭಾಸವಾಗುವಂತಿದೆ. ನಟಿ ಶಿಲ್ಪಾಶೆಟ್ಟಿ ಅವರು ಮಠಕ್ಕೆ ನಿಜವಾದ ಆನೆಯನ್ನೇ ಕೊಡುಗೆಯಾಗಿ ಕೊಡುವವರಿದ್ದರು. ಆದರೆ, ಸರ್ಕಾರದ ಕಾನೂನಿನಡಿ ಕಾನೂನಿನ ತೊಡಕಾಗಬಹುದು ಎಂದು ಕಾಡಿನ ಆನೆಯನ್ನ ಹೋಲುವ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಈ ಆನೆ ಭಕ್ತರಿಗೆ ಆಶೀರ್ವಾದ ಕೂಡ ಮಾಡಲಿದೆ. ರಂಭಾಪುರಿ ಶ್ರೀಗಳು ಈ ರೋಬೋಟಿಕ್ ಆನೆಯನ್ನ ಉದ್ಘಾಟಿಸಿದ ಕೂಡಲೇ ಮಠಕ್ಕೆ ಬಂದಿದ್ದ ನೂರಾರು ಭಕ್ತರು ಆನೆಯ ಆಶೀರ್ವಾದ ಪಡೆದು, ಫೋಟೊ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...