Home Latest News ಬಾಳೆಹೊನ್ನೂರು ಮಠಕ್ಕೆ ರೊಬೋ ಆನೆ ಕೊಡುಗೆ ಕೊಟ್ಟ ಶಿಲ್ಪ ಶೆಟ್ಟಿ
Latest News

ಬಾಳೆಹೊನ್ನೂರು ಮಠಕ್ಕೆ ರೊಬೋ ಆನೆ ಕೊಡುಗೆ ಕೊಟ್ಟ ಶಿಲ್ಪ ಶೆಟ್ಟಿ

Share
Share

ಚಿಕ್ಕಮಗಳೂರು : ಮೂಲತಃ ಕನ್ನಡಿಗರೇ ಆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಬಾಳೆಹೊನ್ನೂರಿನ ಭದ್ರಾನದಿ ತಟದಲ್ಲಿರುವ ರಂಭಾಪುರಿ ಮಠಕ್ಕೆ ಜೀವಂತ ಆನೆಯನ್ನು ನಾಚಿಸುವಂತಹಾ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸುವ ಮೂಲಕ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ.

ನೋಡಲು ಥೇಟ್ ನಿಜವಾದ ಆನೆಯಂತೆ ಕಾಣುವ ಈ ರೋಬೋಟಿಕ್ ಎಲಿಫೆಂಟ್ ಸದಾ ಮಠದ ಆವರಣದಲ್ಲೇ ಇದ್ದು ಭಕ್ತರನ್ನ ಆಶೀರ್ವದಿಸಲಿದೆ. ಈ ರೋಬೋಟಿಕ್ ಆನೆ ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಳುಗಾಡಿಸುತ್ತಿರವ ಆನೆಯನ್ನ ನೋಡಿದರೆ ನಿಜವಾದ ಆನೆ ಕೂಡ ಒಂದು ಕ್ಷಣ ವಿಚಲಿತಗೊಳ್ಳಲಿದ್ದು, ನೋಡಿದ ಕೂಡಲೇ ನಿಜವಾದ ಆನೆ ಎಂದೇ ಭಾಸವಾಗುವಂತಿದೆ. ನಟಿ ಶಿಲ್ಪಾಶೆಟ್ಟಿ ಅವರು ಮಠಕ್ಕೆ ನಿಜವಾದ ಆನೆಯನ್ನೇ ಕೊಡುಗೆಯಾಗಿ ಕೊಡುವವರಿದ್ದರು. ಆದರೆ, ಸರ್ಕಾರದ ಕಾನೂನಿನಡಿ ಕಾನೂನಿನ ತೊಡಕಾಗಬಹುದು ಎಂದು ಕಾಡಿನ ಆನೆಯನ್ನ ಹೋಲುವ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಈ ಆನೆ ಭಕ್ತರಿಗೆ ಆಶೀರ್ವಾದ ಕೂಡ ಮಾಡಲಿದೆ. ರಂಭಾಪುರಿ ಶ್ರೀಗಳು ಈ ರೋಬೋಟಿಕ್ ಆನೆಯನ್ನ ಉದ್ಘಾಟಿಸಿದ ಕೂಡಲೇ ಮಠಕ್ಕೆ ಬಂದಿದ್ದ ನೂರಾರು ಭಕ್ತರು ಆನೆಯ ಆಶೀರ್ವಾದ ಪಡೆದು, ಫೋಟೊ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...