Home namma chikmagalur ಬಾನು ಮುಷ್ತಾಕ್‌ಗೆ ಬೂಕರ್‌ಪ್ರಶಸ್ತಿ-ಟೀಕಾಕಾರರಿಗೆ ನೀಡಿರುವ ಕಪಾಳ ಮೋಕ್ಷ
namma chikmagalurchikamagalurHomeLatest News

ಬಾನು ಮುಷ್ತಾಕ್‌ಗೆ ಬೂಕರ್‌ಪ್ರಶಸ್ತಿ-ಟೀಕಾಕಾರರಿಗೆ ನೀಡಿರುವ ಕಪಾಳ ಮೋಕ್ಷ

Share
Share

ಚಿಕ್ಕಮಗಳೂರು: ಮಹಿಳಾ ಸಾಹಿತ್ಯ ಎಂದರೆ ಹೆಣ್ಣಿನ ಸೌಂದರ್ಯದ ವರ್ಣನೆ ಎಂದು ಹಿಗಳಿಯುವ ಸಾಮಾಜಿಕ ಜಾಲತಾಣದ ಮಂದಿಗೆ ಭಾನು ಮುಸ್ತಾಕ್ ಮತ್ತು ದೀಪಾ ಬಾಸ್ತಿಯವರ ಕೃತಿಗಳಿಗೆ ಅಂತರಾಷ್ಟ್ರೀಯ ಬೂಕರ್‌ಪ್ರಶಸ್ತಿ ಸಂದಿರುವುದು ಟೀಕಾಕಾರರಿಗೆ ನೀಡಿರುವ ಕಪಾಳ ಮೋಕ್ಷ ಎಂದು ಅಂಕಣಗಾರ್ತಿ, ದೀಪ ಹಿರೇಗುತ್ತಿ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪ್ರಪ್ರಥಮ ಸಮ್ಮೇಳದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕವಿಗೋಷ್ಠಿ ಒಂದರಲ್ಲಿ ರಚಿಸಿದ ಕವನವನ್ನು ವಿಮರ್ಷಿಸಿದ ಸಾಮಾಜಿಕ ಜಾಲತಾಣದ ಮಂದಿ ಟೀಕೆಗಳ ಮಹಾಪೂರವನ್ನೇ ಹರಿಸಿದ್ದರು. ಬಹು ಹಿಂದಿನಿಂದಲೂ ಮಹಿಳೆಯರ ಪ್ರಗತಿಯನ್ನು ತಡೆಯುವ ಪಟ್ಟ ಭದ್ರ ಹಿತಾಸಕ್ತಿಗಳ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಮಹಿಳೆಯರು ಅವರ ಟೀಕೆಗಳಿಗೆ ಮೆಟ್ಟಿ ನಿಲ್ಲುವಂತಾಗಬೇಕು ಎಂದು ಹೇಳಿದರು.

ಸಂಕಷ್ಟದಲ್ಲಿರುವ ಮಹಿಳೆಗೆ ಮಹಿಳೆಯೇ ಬೆಂಬಲಿಸುವ ಮೂಲಕ ಪರಸ್ಪರ ಹೆಣ್ಣುಮಕ್ಕಳು ಸಹಕರಿಸಿಕೊಂಡದ್ದೇ ಆದರೆ ಜಗತ್ತಿನಲ್ಲಿ ಹೆಣ್ಣು ಕಣ್ಣೀರು ಹಾಕುವ ಪರಿಸ್ಥಿತಿಯೇ ನಿರ್ಮಾಣವಾಗುವುದಿಲ್ಲ ಈ ನಿಟ್ಟಿನಲ್ಲಿ ಮಹಿಳೆಯರು ಜಾಗೃತರಾಗಿ ಬದುಕಬೇಕೆಂದು ಕಿವಿಮಾತು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳಾ ಸಾಹಿತಿಗಳು ಎನಿಸಿಕೊಂಡವರು ಸಂವಿಧಾನವನ್ನು ಟೀಕಿಸುವುದನ್ನು ಕಾಯಕವನ್ನಾಗಿಸಿ ಕೊಂಡಿದ್ದಾರೆ ಆದರೆ ಮಹಾಭಾರತದ ಕಾಲದಲ್ಲಿ ದ್ರೌಪದಿ ಎಂಬ ಹೆಣ್ಣು ಪಂಥದ ವಸ್ತುವಾಗಿ ಉಪಯೋಗಿಸಲ್ಪಟ್ಟಿದ್ದಳು ಆದರೆ ಅದೇ ಹೆಸರಿನ ಮಹಿಳೆ ದ್ರೌಪದಿ ಮುರ್ಮುರವರಿಗೆ ಸಂವಿಧಾನ ನೀಡಿದ ಬಲದಿಂದ ದೇಶದ ರಾಷ್ಟ್ರಪತಿಯಾಗಿ ರಾರಾಜಿಸುತ್ತಿದ್ದಾರೆ ಇದು ಸಂವಿಧಾನ ಮಹಿಳೆಯರಿಗೆ ನೀಡಿರುವ ಬಲ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌಧರಿ ಮಾತನಾಡಿ ಪುರುಷ ಪ್ರಧಾನ ಸಮಾಜದಲ್ಲಿ ಪುರುಷರ ದಬ್ಬಾಳಿಕೆಯ ನಡುವೆಯೂ ಮಹಿಳೆ ತನ್ನ ಆತ್ಮೀಯತೆಯ ಉಳಿವಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾಳೆ. ಹಲವು ಯಶಸ್ವಿಗಳನ್ನು ಕಂಡಿದ್ದಾಳೆ ಅದೇ ನಿಟ್ಟಿನಲ್ಲಿ ಚಿಕ್ಕಮಗಳೂರು ನಲ್ಲಿ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಬೆಳೆದು ನಿಂತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಮಹಿಳೆಯರ ಮೇಲೆ ದೌರ್ಜನ್ಯಗಳಾದಾಗ ರಾಜ್ಯ ಮಹಿಳಾ ಆಯೋಗ ಸದಾ ಮಹಿಳೆಯರ ರಕ್ಷಣೆಗೆ ಸಿದ್ಧವಿದೆ ಸಂಕಷ್ಟಕ್ಕೆ ಒಳಗಾದ ಮಹಿಳೆಯರು೧೧೨ ಸಂಖ್ಯೆಗೆ ಕರೆ ಮಾಡಿ ನೆರವು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಯುವಜನ ಕ್ರೀಡಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಮಂಜುಳಾ ಹುಲ್ಲಳ್ಳಿ, ಗ್ರಂಥ ಪಾಲಕಿ ಸತ್ಯವತಿ, ರಂಗ ನಿರ್ದೇಶಕಿ ಪ್ರತಿಭಾ ನಂದಕುಮಾರ್ ರವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇದಿಕೆಯಲ್ಲಿ ಮಕ್ಕಳ ವೈದ್ಯ ಜೆ.ಪಿ ಕೃಷ್ಣೇಗೌಡ ರೇಖಾಹುಲಿಯಪ್ಪ ಗೌಡ,ರೂಪ ನಾಯಕ್ ನಿರ್ಮಲ ಮಂಚೇಗೌಡ, ಸುರೇಶ್ ವಕೀಲ ವೆಂಕಟೇಶ್ ಕೋಶಾಧ್ಯಕ್ಷ ಪ್ರಕಾಶ್ ಉಪಸ್ಥಿತರಿದ್ದರು

Booker Prize for Banu Mushtaq – a slap in the face to critics

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...