Home Crime News ಚಿರತೆ ದಾಳಿಗೆ ಬಾಲಕನಿಗೆ ಗಂಭೀರ ಗಾಯ
Crime NewsHomeKadurLatest Newsnamma chikmagalur

ಚಿರತೆ ದಾಳಿಗೆ ಬಾಲಕನಿಗೆ ಗಂಭೀರ ಗಾಯ

Share
Share

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಒಂದು ವಾರದ ಹಿಂದಷ್ಟೇ ಐದು ವರ್ಷದ ಬಾಲಕಿಯನ್ನು ಬಲಿ ಪಡೆದ ಆಘಾತ ಮಾಸುವ ಮುನ್ನವೇ, ಮತ್ತೊಂದು ಮಗುವಿನ ಮೇಲೆ ಚಿರತೆ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ.

ಇತ್ತೀಚೆಗೆ, ಬೀರೂರು ಸಮೀಪದ ನವಿಲೇಕಲ್ಲು ಗುಡ್ಡ ಗ್ರಾಮದಲ್ಲಿ ಕೂಲಿ ಕಾರ್ಮಿಕ ಬಸವರಾಜ ಅವರ ಪುತ್ರಿ, 5 ವರ್ಷದ ಸಾನ್ವಿಯನ್ನು ಮನೆಯ ಹಿಂದೆಯೇ ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕರುಣಾಜನಕ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಭೀಕರ ಘಟನೆ ಮಾಸುವ ಮೊದಲೇ, ನಿನ್ನೆ ಲಿಂಗದಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆದಿದೆ. ಮನೆಯ ಬಳಿ ನಿಂತಿದ್ದ 11 ವರ್ಷದ ಬಾಲಕ ಹೃದಯ್ ಎಂಬಾತನ ಮೇಲೆ ಚಿರತೆ ಏಕಾಏಕಿ ಎರಗಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿರತೆಯ ಈ ನಿರಂತರ ಹಾವಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ಗ್ರಾಮಸ್ಥರ ದೂರು. ಕೇವಲ ನಿನ್ನೆಯಷ್ಟೇ ತರೀಕೆರೆ ತಾಲೂಕಿನ ಕೆಂಚಾಪುರ ಗ್ರಾಮದ ಮೇರಿಯಮ್ಮ ಎಂಬುವರ ಮನೆಯ ಸುತ್ತಮುತ್ತ ಚಿರತೆ ಓಡಾಡುತ್ತಿರುವ ಮತ್ತು ನೀರು ಕುಡಿಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಗ್ರಾಮಸ್ಥರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ನಿರಂತರವಾಗಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗಿ ಮಕ್ಕಳು ಹಾಗೂ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದರೂ, ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿರುವುದು ಸ್ಥಳೀಯರ ಆತಂಕಕ್ಕೆ ಮುಖ್ಯ ಕಾರಣವಾಗಿದೆ. ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಚಿರತೆಯನ್ನು ಸೆರೆಹಿಡಿದು ಜನರ ಜೀವ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Boy seriously injured in leopard attack

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...