Home namma chikmagalur chikamagalur ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ
chikamagalurCrime NewsHomeLatest Newsnamma chikmagalur

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

Share
Share

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ ಸುಮಾರು ₹1.70 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನರಸಿಂಹರಾಜಪುರ ತಾಲ್ಲೂಕಿನ ಮೆಣಸೂರು ಗ್ರಾಮದಲ್ಲಿ ನಡೆದಿದೆ.

ಮೆಣಸೂರು ಗ್ರಾಮದ ಲಕ್ಷ್ಮೀದೇವಿ (72) ಅವರು ನೀಡಿದ ದೂರಿನ ಆಧಾರದ ಮೇಲೆ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀದೇವಿ ಅವರು ಪತಿ ಗಣಪತಿ ಅವರೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಗಣಪತಿ ನಿವೃತ್ತ ಶಿಕ್ಷಕರಾಗಿದ್ದಾರೆ. ಎಂದಿನಂತೆ ಬುಧವಾರ ರಾತ್ರಿ 10.30ರ ಸುಮಾರಿಗೆ ಊಟ ಮುಗಿಸಿ ದಂಪತಿ ತಮ್ಮ ಕೊಠಡಿಯಲ್ಲಿ ಮಲಗಿದ್ದರು.

ಗುರುವಾರ ಬೆಳಗಿನ ಜಾವ ಸುಮಾರು 12.30ರ ವೇಳೆಗೆ ಲಕ್ಷ್ಮೀದೇವಿ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಯಾರೋ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ನಿದ್ದೆಯಿಂದ ಎಚ್ಚರಗೊಂಡ ಅವರು ಸರವನ್ನು ಬಿಗಿಯಾಗಿ ಹಿಡಿದುಕೊಂಡು ಕಳ್ಳ, ಕಳ್ಳ ಎಂದು ಕೂಗಿಕೊಂಡಿದ್ದಾರೆ. ಈ ವೇಳೆ ಪತಿ ಎದ್ದು ನೋಡುವಷ್ಟರಲ್ಲಿ ಕಳ್ಳ ಸರದ ಅರ್ಧ ಭಾಗವನ್ನು ಕಿತ್ತುಕೊಂಡು ಮನೆಯ ಹಿಂಭಾಗದಿಂದ ಪರಾರಿಯಾಗಿದ್ದಾನೆ. ಬಳಿಕ ಮನೆಯ ಮುಂಭಾಗದ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳಿದ ಶಬ್ದ ಕೇಳಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮನೆಯ ಪರಿಶೀಲನೆ ನಡೆಸಿದಾಗ ಅಡುಗೆ ಮನೆಯ ಮೇಲ್ಛಾವಣಿಯ ಹೆಂಚುಗಳನ್ನು ತೆಗೆದು ಕಳ್ಳ ಒಳನುಗ್ಗಿರುವುದು ಪತ್ತೆಯಾಗಿದೆ. ಬಳಿಕ ದಂಪತಿ ಮಲಗಿದ್ದ ಕೊಠಡಿಗೆ ತೆರಳಿ ಲಕ್ಷ್ಮೀದೇವಿ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುವುದು ಗೊತ್ತಾಗಿದೆ.

ಲಕ್ಷ್ಮೀದೇವಿ ಅವರು ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದರಿಂದ ಅದು ಅರ್ಧಕ್ಕೆ ತುಂಡಾಗಿದ್ದು, ಸುಮಾರು 17 ಗ್ರಾಂ ತೂಕದ ಬಂಗಾರದ ತಾಳಿ, ಎರಡು ಗುಂಡು ಹಾಗೂ ಎರಡು ಕಾಸು ಒಳಗೊಂಡ ಭಾಗವನ್ನು ಕಳ್ಳ ಕಿತ್ತುಕೊಂಡು ಹೋಗಿದ್ದಾನೆ. ಕಳವಾಗಿರುವ ಚಿನ್ನದ ಮೌಲ್ಯ ಅಂದಾಜು ₹1.70 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಕುರಿತು ನರಸಿಂಹರಾಜಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮನೆಗೆ ನುಗ್ಗಿದ ಕಳ್ಳನ ಪತ್ತೆ ಹಾಗೂ ಕಳವಾಗಿರುವ ಚಿನ್ನಾಭರಣ ವಶಪಡಿಸಿಕೊಳ್ಳಲು ತನಿಖೆ ಮುಂದುವರಿಸಿದ್ದಾರೆ.

Breaking and entering the house by removing the roof tiles

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...

₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು

ಚಿಕ್ಕಮಗಳೂರು: ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ₹10.13 ಲಕ್ಷ ಮೌಲ್ಯದ 32 HDPE...