Home Latest News ಏಕಾಏಕಿ ಕುಸಿದ ಸೇತುವೆ : ಸಂಪರ್ಕವಿಲ್ಲದೆ ಜನ ಅತಂತ್ರ
Latest News

ಏಕಾಏಕಿ ಕುಸಿದ ಸೇತುವೆ : ಸಂಪರ್ಕವಿಲ್ಲದೆ ಜನ ಅತಂತ್ರ

Share
Share

ಚಿಕ್ಕಮಗಳೂರು : ಭದ್ರಾ ಮೇಲ್ದಂಡೆ ನೀರಿನ ರಭಸಕ್ಕೆ ಅಬ್ಬಿನಹೊಳಲು ಗ್ರಾಮದ ಸೇತುವೆ ಕುಸಿತದಿಂದ ಐದಾರು ಹಳ್ಳಿಯವರು ದ್ವೀಪದ ಒಳಗೆ ಸೇರಿಕೊಂಡಿದ್ದಾರೆ ಎಂದು ಅ ಭಾಗದ ಜನ ದೂರುತ್ತಿದ್ದಾರೆ.

ಇಂದು ಸಂಜೆ ಏಳು ಗಂಟೆಗೆ ಸೇತುವೆ ಕುಸಿದಿದೆ ಯಾವುದೋ ಕಾಲದಲ್ಲಿ ಕಟ್ಟಿರುವ ಸೇತುವೆ ಬಗ್ಗೆ ಗಮನ ಹರಿಸದ ಬೇಜವಾಬ್ದಾರಿ ಇಂಜಿನಿಯರ್ ಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೆಯ ಸೇತುವೆಯಲ್ಲಿ ನೀರು ಹರಿಸುತ್ತಿರುವ ಪರಿಣಾಮದಿಂದಾಗಿ ಜನರು ಪರುದಾಡುವಂತಾಗಿದೆ.

ಅಬ್ಬಿನಹೊಳಲು ,ಮೆಣಸಿನಕಾಯಿ ಹೊಸಳ್ಳಿ, ಬಂಗನಗಟ್ಟೆ ಮತ್ತು ಶಿವನಿ ಸುತ್ತಮುತ್ತಲಿನ ಜನ, ಜಾನುವಾರು ಮತ್ತು ವಾಹನಗಳು ಸಂಚಾರ ಮಾಡಲು ಸಾಧ್ಯವಿಲ್ಲ.
ಬಯಲು ಸೀಮೆಯಲ್ಲೂ ದ್ವೀಪ ನಿರ್ಮಾಣ ಮಾಡಿರುವ ಬೃಹಸ್ಪತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರಿಗೆ ಜನ ಥೂ ಎಂತ ಉಗಿಯುತ್ತಿದ್ದಾರೆ. ಬೆಳಗ್ಗೆ ಮಕ್ಕಳು ಮತ್ತು ಕಾಲೇಜ್ ಗೆ ಹೋಗಲು ಆಗದೆ ಮತ್ತು ರೈತರು ಹೊಲ ಮನೆಗಳಿಗೆ ಹೋಗಿ ಬರದಂತೆ ಆಗಿದೆ ಉಪಮುಖ್ಯಮಂತ್ರಿ ಶಿವಕುಮಾರ್ ಈ ಸ್ಥಳಕ್ಕೆ ಭೇಟಿ ಕೊಟ್ಟು ಒಂದು ವರ್ಷ ತುಂಬಿಲ್ಲ ಇಂತಹ ಅನಾಹುತ ನಡೆದಿದೆ.ಮಾನಮರ್ಯಾದೆ ಇದ್ದರೆ ತಕ್ಷಣವೇ ಕ್ರಮ ಕೈಗೊಂಡು ಜನರಿಗೆ ಆಗಿರುವ ತೊಂದರೆ ನಿವಾರಿಸಲಿ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...