Home Latest News ಏಕಾಏಕಿ ಕುಸಿದ ಸೇತುವೆ : ಸಂಪರ್ಕವಿಲ್ಲದೆ ಜನ ಅತಂತ್ರ
Latest News

ಏಕಾಏಕಿ ಕುಸಿದ ಸೇತುವೆ : ಸಂಪರ್ಕವಿಲ್ಲದೆ ಜನ ಅತಂತ್ರ

Share
Share

ಚಿಕ್ಕಮಗಳೂರು : ಭದ್ರಾ ಮೇಲ್ದಂಡೆ ನೀರಿನ ರಭಸಕ್ಕೆ ಅಬ್ಬಿನಹೊಳಲು ಗ್ರಾಮದ ಸೇತುವೆ ಕುಸಿತದಿಂದ ಐದಾರು ಹಳ್ಳಿಯವರು ದ್ವೀಪದ ಒಳಗೆ ಸೇರಿಕೊಂಡಿದ್ದಾರೆ ಎಂದು ಅ ಭಾಗದ ಜನ ದೂರುತ್ತಿದ್ದಾರೆ.

ಇಂದು ಸಂಜೆ ಏಳು ಗಂಟೆಗೆ ಸೇತುವೆ ಕುಸಿದಿದೆ ಯಾವುದೋ ಕಾಲದಲ್ಲಿ ಕಟ್ಟಿರುವ ಸೇತುವೆ ಬಗ್ಗೆ ಗಮನ ಹರಿಸದ ಬೇಜವಾಬ್ದಾರಿ ಇಂಜಿನಿಯರ್ ಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೆಯ ಸೇತುವೆಯಲ್ಲಿ ನೀರು ಹರಿಸುತ್ತಿರುವ ಪರಿಣಾಮದಿಂದಾಗಿ ಜನರು ಪರುದಾಡುವಂತಾಗಿದೆ.

ಅಬ್ಬಿನಹೊಳಲು ,ಮೆಣಸಿನಕಾಯಿ ಹೊಸಳ್ಳಿ, ಬಂಗನಗಟ್ಟೆ ಮತ್ತು ಶಿವನಿ ಸುತ್ತಮುತ್ತಲಿನ ಜನ, ಜಾನುವಾರು ಮತ್ತು ವಾಹನಗಳು ಸಂಚಾರ ಮಾಡಲು ಸಾಧ್ಯವಿಲ್ಲ.
ಬಯಲು ಸೀಮೆಯಲ್ಲೂ ದ್ವೀಪ ನಿರ್ಮಾಣ ಮಾಡಿರುವ ಬೃಹಸ್ಪತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರಿಗೆ ಜನ ಥೂ ಎಂತ ಉಗಿಯುತ್ತಿದ್ದಾರೆ. ಬೆಳಗ್ಗೆ ಮಕ್ಕಳು ಮತ್ತು ಕಾಲೇಜ್ ಗೆ ಹೋಗಲು ಆಗದೆ ಮತ್ತು ರೈತರು ಹೊಲ ಮನೆಗಳಿಗೆ ಹೋಗಿ ಬರದಂತೆ ಆಗಿದೆ ಉಪಮುಖ್ಯಮಂತ್ರಿ ಶಿವಕುಮಾರ್ ಈ ಸ್ಥಳಕ್ಕೆ ಭೇಟಿ ಕೊಟ್ಟು ಒಂದು ವರ್ಷ ತುಂಬಿಲ್ಲ ಇಂತಹ ಅನಾಹುತ ನಡೆದಿದೆ.ಮಾನಮರ್ಯಾದೆ ಇದ್ದರೆ ತಕ್ಷಣವೇ ಕ್ರಮ ಕೈಗೊಂಡು ಜನರಿಗೆ ಆಗಿರುವ ತೊಂದರೆ ನಿವಾರಿಸಲಿ.

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...