Home namma chikmagalur ಸೇತುವೆ ಮಾಡಿ ಇಲ್ಲ ದೋಣಿ ಬಿಡಿ
namma chikmagalurchikamagalurHomeLatest News

ಸೇತುವೆ ಮಾಡಿ ಇಲ್ಲ ದೋಣಿ ಬಿಡಿ

Share
Share

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಿಳ್ಳೆನಹಳ್ಳಿ ಗ್ರಾಮದ ಸಾವಿರಾರು ಎಕರೆ ಜಮೀನು ತೋಟಗಳಿದ್ದು ಕಡೆ ಕಾಲುವೆ ರಸ್ತೆ ಬಳಸಿಕೊಂಡು ಹೋಗಬೇಕಾಗಿರುತ್ತದೆ.

ಈ ರಸ್ತೆಯು ಕಡೂರು ಚಿಕ್ಕಮಗಳೂರು ರಸ್ತೆ ಸೇರಿಕೊಂಡು ಶ್ರೀನಿವಾಸಪುರ ಮತ್ತು ಅಯ್ಯನಕೆರೆಗಳಿಗೆ ದಾರಿ ಆಗಿರುತ್ತದೆ ಮತ್ತು ಕುನ್ನಾಳು ಗ್ರಾಮಕ್ಕು ಸಂಪರ್ಕ ರಸ್ತೆ ಆಗಿರುತ್ತದೆ, ಈ ರಸ್ತೆಗೆ ಅಡ್ಡಲಾಗಿ ಹಾದು ಹೋಗುವ ವೇದಾ ನದಿಯ ಬಸವನಹಳ್ಳವನ್ನು ದಾಟಿ ಓಡಾಡುವುದು ತುಂಬಾ ಕಷ್ಟಕರವಾಗಿರುತ್ತದೆ.

ಏಕೆಂದರೆ ಸೆಪ್ಟಂಬರ್ ನಲ್ಲಿ ಬಿದ್ದ ಮಳೆಯಿಂದ ಹಳ್ಳದ ಮಣ್ಣು ಕೊಚ್ಚಿ ಮೊಣಕಾಲುದ್ದ ನೀರು ಹರಿದು ಹೋಗುತ್ತಿದ್ದು ಜನಜಾನುವಾರುಗಳು ದಾಟುವುದಕ್ಕೂ ಮತ್ತು ಬೈಕ್ ಮತ್ತು ಇತರ ವಾಹನಗಳು ದಾಟಿ ಹೋಗೋದು ದುಸ್ತರವಾಗಿರುತ್ತದೆ. ಹತ್ತಾರು ಬೈಕುಗಳು ವಾಹನಗಳು ಸೈಲೆನ್ಸರ್ ಮುಖಾಂತರ ನೀರು ತುಂಬಿ ಹಾಳಾಗಿ ಹೋಗಿರುತ್ತದೆ

ಸದ್ಯ ಅಡಿಕೆ ಕೊಯ್ಲು ನಡೆಯುತ್ತಿದ್ದು ರೈತಪಿಗಳು ಬಳಸಿಕೊಂಡು ಸಖರಾಯಪಟ್ಟಣ ರಸ್ತೆ ಮೂಲಕ ಜಮೀನುಗಳಿಗೆ ತೋಟಗಳಿಗೆ ಹೋಗುತ್ತಿದ್ದಾರೆ

ಆದ್ದರಿಂದ ಒಂದು ಸೇತುವೆ ಅವಶ್ಯಕತೆ ಇದ್ದು ತಕ್ಷಣ ಸಂಬಂಧಪಟ್ಟ ಇಲಾಖೆಯವರು ಕೈಗೊಳ್ಳಬೇಕೆಂದು ಆಗ್ರಹಿಸಿ ಪೇಪರ್ ದೋಣಿಯನ್ನು ತೇಲಿ ಬಿಡುವ ಮೂಲಕ ಸೇತುವೆ ಮಾಡಿ ಇಲ್ಲ ದೋಣಿ ಕೊಡಿ ಎಂಬ ಘೋಷಣೆಯೊಂದಿಗೆ ವಿನೂತನ ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಮತ್ತು ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲಾಯಿತು

Build a bridge or leave the boat.

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...