Home namma chikmagalur ajjampura ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ
ajjampuraCrime NewsHomeLatest Newsnamma chikmagalur

ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ

Share
Share

ಅಜ್ಜಂಪುರ: ರೈತರೊಬ್ಬರ ಎತ್ತಿನ ಗಾಡಿ ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಕಳೆದುಹೋದ ತಮ್ಮ ಕಬ್ಬಿಣದ ಎತ್ತಿನ ಗಾಡಿಗಾಗಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಲ್ಲಪ್ಪ ಅವರು ಸುಮಾರು 15 ವರ್ಷಗಳ ಹಿಂದೆ ಹೊಸದುರ್ಗದ ಟಿಬಿ ಸರ್ಕಲ್‌ನಲ್ಲಿರುವ ಗೌಸಿಯಾ ವೆಲ್ಡಿಂಗ್ ಶಾಪ್‌ನಲ್ಲಿ ಈ ಕಬ್ಬಿಣದ ಟೈರ್ ಗಾಡಿಯನ್ನು ಮಾಡಿಸಿದ್ದರು. ಇದನ್ನು ಅವರು ತಮ್ಮ ಅಸಂಧಿ-ಮುದಿಗೆರೆ ರಸ್ತೆಯ ಪಕ್ಕದಲ್ಲಿರುವ ಸ್ವಂತ ಶೆಡ್ ಮುಂಭಾಗದಲ್ಲಿ ಪ್ರತಿದಿನ ನಿಲ್ಲಿಸುತ್ತಿದ್ದರು.

ಮಾರ್ಚ್ 23ರ ರಾತ್ರಿ 10 ಗಂಟೆ ಸುಮಾರಿಗೆ ದನಗಳಿಗೆ ಮೇವು ಹಾಕಿ ಎತ್ತಿನ ಗಾಡಿಯನ್ನು ಗಮನಿಸಿ ಮನೆಗೆ ತೆರಳಿದ್ದ ಇವರು, ಮರುದಿನ ಬೆಳಿಗ್ಗೆ 7 ಗಂಟೆಗೆ ಹಾಲು ಕರೆಯಲು ಬಂದಾಗ ಗಾಡಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಈ ಎತ್ತಿನ ಗಾಡಿಯನ್ನು ಮಾರ್ಚ್ 23ರ ರಾತ್ರಿ 10 ರಿಂದ ಮಾರ್ಚ್ 24ರ ಬೆಳಿಗ್ಗೆ 7 ಗಂಟೆಯ ಮಧ್ಯದ ಅವಧಿಯಲ್ಲಿ ಕಳ್ಳರು ಅಪಹರಿಸಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಲ್ಲಪ್ಪ ಅವರು ನೀಡಿದ ದೂರಿನ ಮೇರೆಗೆ ಅಜ್ಜಂಪುರ ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

Bullock cart theft of a farmer in Asandhi village of Ajjampur taluk

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...