ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ ಸಮುದಾಯಗಳಿಗೆ ಮಾಡುವ ದೊಡ್ಡ ಅನ್ಯಾಯವಾಗಿದೆ.
ಕೇವಲ ಒಂದು ವರ್ಗದ ಮತಗಳನ್ನು ನೆಚ್ಚಿಕೊಂಡು ಈ ರೀತಿ ತಾರತಮ್ಯ ಮಾಡುವುದು ಸಂವಿಧಾನ ವಿರೋಧಿ ನೀತಿಯಾಗುತ್ತದೆ. ಸರ್ಕಾರಕ್ಕೆ ಬಡವರ ಮೇಲೆ ನಿಜವಾದ ಕಾಳಜಿ ಇದ್ದರೆ ಎಲ್ಲಾ ನಿಗಮಗಳ ಮೂಲಕ ಸಾಲ ಪಡೆದಿರುವ ಬಡವರ ಬಡ್ಡಿಯನ್ನೂ ತಕ್ಷಣವೇ ಮನ್ನಾ ಮಾಡಲಿ ಎಂದು ಸವಾಲು ಹಾಕಿದರು.
Leave a comment