Home namma chikmagalur chikamagalur  ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ಹಠ ! ಇತರರಿಗೆ ಪೀಕಲಾಟ ?
chikamagalurHomeLatest Newsnamma chikmagalur

 ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ಹಠ ! ಇತರರಿಗೆ ಪೀಕಲಾಟ ?

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ .ಅಖಾಡದಲ್ಲಿ ಒಂದೇ ಪಕ್ಷದವರು ಅಂದರೆ ಬಿಜೆಪಿ ಯಲ್ಲಿಯೇ ಪೈಪೋಟಿ ನಡೆಯುತ್ತಿದೆ.

ಸಿ.ಟಿ.ರವಿ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾಗ ಬೇಕೆಂಬ ಹಠಕ್ಕೆ ಬಿದ್ದಿರುವುದು ಬಹಿರಂಗ ಸತ್ಯ. ಯಾವಾಗ ಸೊಸೈಟಿ ನಿರ್ದೇಶಕರಾದರೋ ಅಂದೇ ನಿರ್ಧಾರ ಮಾಡಿಕೊಂಡಂತೆ ಹೀಗಾಗಿ ಈಗಾಗಲೇ ಹಲವರ ಜೊತೆಗೆ ಮಾತನಾಡಿದ್ದಾರೆ.ಇವರು ಮನಸ್ಸು ಮಾಡಿದರೆ ದೊಡ್ಡ ವಿಚಾರವಲ್ಲ.ಆದರೆ ಹಾಲಿ ಅಧ್ಯಕ್ಷ ಸುರೇಶ್ ಮತ್ತೆ ಮುಂದುವರೆಯ ಬೇಕು ಎಂಬ ತೀರ್ಮಾನ ಮಾಡಿಕೊಂಡಿರುವುದು ಬಿಜೆಪಿ ಒಳ ಜುಗಲ್ ಬಂದಿಗೆ ಕಾರಣವಾಗಿದೆ.

ಜಾತಿ ಜಗಳದ ಫಲಶೃತಿಗೆ ಬೇಸತ್ತಿರುವ ಸುರೇಶ್ ಕಳೆದ ಐದು ವರ್ಷಗಳಿಂದ ಬ್ಯಾಂಕ್ ನಬಾರ್ಡ್ ನಿಂದ “ಎ” ಗ್ರೇಡ್ ಸ್ಥಾನ ಪಡೆದಿದೆ.ರೈತರಿಗೆ ನಿರೀಕ್ಷೆ ಮೀರಿ ಸಾಲ ನೀಡಲಾಗಿದೆ ಜೊತೆಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ ಆದರೂ ಲಿಂಗಾಯತರು ಬ್ಯಾಂಕ್ ಕೆಡಿಸಿದ್ದಾರೆ ಎಂದು ಸಮೂಹದ ಬಗ್ಗೆ ಮಾತನಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಇದರ ಬದಲು ಸುರೇಶ್ ಸರಿಯಾದ ಆಡಳಿತ ನೀಡಲಿಲ್ಲ ಎಂದು ಹೇಳಿದ್ದರೆ ಒಪ್ಪಬಹುದಿತ್ತು ಎನ್ನುವ ಅಭಿಪ್ರಾಯ ಕೇಳಿಬರುತ್ತಿದೆ ಇದಕ್ಕೆ ಕೆರಳಿರುವ ಸುರೇಶ್ ಚುನಾವಣೆ ನಡೆಯಲಿ ಎಂಬ ಅಭಿಪ್ರಾಯಕ್ಕೆ ಬಂದಂತೆ ಕಾಣುತ್ತಿದೆ.
ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಸಂಜೆ ನಡೆಯಲಿದೆ ಅಲ್ಲಿ ತೀರ್ಮಾನ ಕಷ್ಟವಾದರೆ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಮಾಡಬಹುದು.

ರಾಜಕೀಯದಲ್ಲಿ ಸಿ.ಟಿ.ರವಿ ಸ್ಟ್ರಾಂಗ್ ಎನ್ನುವುದರಲ್ಲಿ ಅನುಮಾನವಿಲ್ಲ.ಸುರೇಶ್ ಕೂಡ ಈ ವಿಚಾರದಲ್ಲಿ ಗಟ್ಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಸಿ.ಟಿ.ರವಿ ವಿರುದ್ದ ಕೂಡ ಬಿಜೆಪಿಯಲ್ಲಿ ಮುಡುಗಟ್ಟಿದ ವಾತವರಣ ಇರುವುದು ಗುಟ್ಟಾಗಿ ಉಳಿದಿಲ್ಲ. ಬ್ಯಾಂಕ್ ಗೆ ಆಡಳಿತಾಧಿಕಾರಿ ನೇಮಕವಾಗಿದ್ದರೆ ಎಲ್ಲರೂ ಮನೆಯಲ್ಲಿ ಇರಬೇಕಿತ್ತು ಆದರೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಬೆಳ್ಳಿ ಪ್ರಕಾಶ್ ರ ಧೈರ್ಯಕ್ಕೆ ಸಾಥ್ ನೀಡಿದವರು ಸುರೇಶ್ ಈಗ ನೋಡಿದರೆ ಜಾತಿ ಲಡಾಯಿ ಮಾಡಿ ನಾನು,ನಾನು ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಯನ್ನು ಬಿಜೆಪಿ ಮಾಜಿ ಶಾಸಕರೊಬ್ಬರು ನಿರ್ದಾಕ್ಷಿಣ್ಯವಾಗಿ ಹೇಳುವ ಸಾಧ್ಯತೆ ಇದೆ.

ಸಿ.ಟಿ.ರವಿ ಅಧ್ಯಕ್ಷರಾದರೆ ಬಸವರಾಜಪ್ಪ ಉಪಾಧ್ಯಕ್ಷರಾಗುವ ಸಾಧ್ಯತೆ ಇದೆ.ಡಿ.ಎಸ್.ಸುರೇಶ್ ಅಧ್ಯಕ್ಷರಾಗಿ ಮುಂದುವರೆದರೆ ಶೃಂಗೇರಿ ಕ್ಷೇತ್ರದ ಯಾರಾದರೂ ಉಪಾಧ್ಯಕ್ಷ ರಾಗಬಹುದು ಎಂಬ ಸುದ್ದಿ ಇದೆ. ಡಿ.ಸಿ.ಸಿ.ಬ್ಯಾಂಕ್ ನಿಂದ ರಾಜಕೀಯ ಏರು ಪೇರು ಆಗಿರುವುದನ್ನು ನೋಡಿದರೆ ಜಿಲ್ಲಾ ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆ ಆಗುವುದು ಖಚಿತ ಎಂದು ಅನುಭವಿ ರಾಜಕಾರಣಿಗಳ ಅಭಿಪ್ರಾಯ.

C.T. Ravi Hatha for the post of DCC Bank Chairman

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...