ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹಿರೇಗೌಜ ಟೀಕಿಸಿದರು.
ಅಧಿಕಾರ ಇಲ್ಲದೇ ಒಂದೂವರೆ ವರ್ಷ ಕಾಲ ಮೌನಕ್ಕೆ ಶರಣಾಗಿದ್ದ ಸಿ.ಟಿ.ರವಿ, ಹಿಂಬಾಗಿಲ ಮೂಲಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಸಚಿವೆ ವಿರುದ್ಧ ಕೆಟ್ಟಪದ ಬಳಸಿದ್ದರು, ಸವಿತಾ ಸಮಾಜದ ವಿರುದ್ಧ ನಿಷೇಧಿತ ಪದ ಬಳಸಿ ಆ ಸಮಾಜದಿಂದ ಛೀಮಾರಿ ಹಾಕಿಸಿಕೊಂಡಿದ್ದರು. ತಮ್ಮಯ್ಯ ಅವರು ಸರಳ ಸಜ್ಜನಿಕೆ ವ್ಯಕ್ತಿ. ಈಗ ಅವರ ವಿರುದ್ಧ ಸಿ.ಟಿ.ರವಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಅವರ ದುರ್ನಡತೆ ಕಾರಣದಿಂದ ಜನ ಹೀನಾಯವಾಗಿ ಸೋಲಿಸಿದ್ದಾರೆ. ನಗರಸಭೆಯಿಂದ ಡಿಸೇಲ್ ಹಾಕಿಸಿಕೊಂಡು ಬೆಂಗಳೂರಿಗೆ ತಿರುಗಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ತಮ್ಮಯ್ಯ ನಗರಸಭೆ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಗರದ ಅಭಿವೃದ್ಧಿ ಕೆಲಸಕ್ಕೆ ನಗರಸಭೆ ಡಿಸೇಲ್ ಬಳಸಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ‘ಸಿ.ಟಿ.ರವಿ ಅವರಿಗೆ ಮಾತಿನ ಮೇಲೆ ಹಿಡಿತವಿಲ್ಲ. ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕಾರ ನೀಡಲಿ, ರಾಜಕೀಯ ಲಾಭಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.
C.T. Ravi is tongue-tied in frustration over defeat.
Leave a comment