Home ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ
HomechikamagalurLatest Newsnamma chikmagalurPolitical News

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

Share
Share

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹಿರೇಗೌಜ ಟೀಕಿಸಿದರು.

ಅಧಿಕಾರ ಇಲ್ಲದೇ ಒಂದೂವರೆ ವರ್ಷ ಕಾಲ ಮೌನಕ್ಕೆ ಶರಣಾಗಿದ್ದ ಸಿ.ಟಿ.ರವಿ, ಹಿಂಬಾಗಿಲ ಮೂಲಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಸಚಿವೆ ವಿರುದ್ಧ ಕೆಟ್ಟಪದ ಬಳಸಿದ್ದರು, ಸವಿತಾ ಸಮಾಜದ ವಿರುದ್ಧ ನಿಷೇಧಿತ ಪದ ಬಳಸಿ ಆ ಸಮಾಜದಿಂದ ಛೀಮಾರಿ ಹಾಕಿಸಿಕೊಂಡಿದ್ದರು. ತಮ್ಮಯ್ಯ ಅವರು ಸರಳ ಸಜ್ಜನಿಕೆ ವ್ಯಕ್ತಿ. ಈಗ ಅವರ ವಿರುದ್ಧ ಸಿ.ಟಿ.ರವಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಅವರ ದುರ್ನಡತೆ ಕಾರಣದಿಂದ ಜನ ಹೀನಾಯವಾಗಿ ಸೋಲಿಸಿದ್ದಾರೆ. ನಗರಸಭೆಯಿಂದ ಡಿಸೇಲ್ ಹಾಕಿಸಿಕೊಂಡು ಬೆಂಗಳೂರಿಗೆ ತಿರುಗಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ತಮ್ಮಯ್ಯ ನಗರಸಭೆ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಗರದ ಅಭಿವೃದ್ಧಿ ಕೆಲಸಕ್ಕೆ ನಗರಸಭೆ ಡಿಸೇಲ್ ಬಳಸಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ‘ಸಿ.ಟಿ.ರವಿ ಅವರಿಗೆ ಮಾತಿನ ಮೇಲೆ ಹಿಡಿತವಿಲ್ಲ. ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕಾರ ನೀಡಲಿ, ರಾಜಕೀಯ ಲಾಭಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.

C.T. Ravi is tongue-tied in frustration over defeat.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...