Home namma chikmagalur chikamagalur ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು
chikamagalurHomeLatest Newsnamma chikmagalur

ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು

Share
Share

ಚಿಕ್ಕಮಗಳೂರು: ಹಿಂದುತ್ವ ಜಪಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸೋಲಿನ ಬಳಿಕ ದಲಿತತ್ವ ನೆನಪಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ ಟೀಕಿಸಿದರು.

ಇಪ್ಪತ್ತು ವರ್ಷ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿರುವ ಸಿ.ಟಿ.ರವಿ ಅವರು ದಲಿತ ಸಂಘಟನೆಗಳ ನಾಯಕರನ್ನು ನಗರ ನಕ್ಸಲರು ಎಂದು ಕರೆದು ಅಪಮಾನ ಮಾಡಿದ್ದರು. ದಲಿತ ಸಂಘಟನೆಗಳ ನಾಯಕರನ್ನು ಭೀಮೋತ್ಸವ ಕಾರ್ಯಕ್ರಮಕ್ಕೆ ಬರುವಂತೆ ಕರೆದಿರುವುದು ದಲಿತರ ಶಕ್ತಿ ಏನೆಂಬುದು ಅರ್ಥವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ದಲಿತರ ಮತಕ್ಕಾಗಿ ಭೀಮೋತ್ಸವದ ಹೆಸರಿನಲ್ಲಿ ರಾಜಕೀಯ ಮಾಡಲು ಸಿ.ಟಿ.ರವಿ ಹೊರಟಿದ್ದಾರೆ. ಆರ್‌ಎಸ್‌ಎಸ್ ಸಂಘಟನೆ ಅವರಿಗೆ ಅಂಬೇಡ್ಕರ್ ಸಿದ್ಧಾಂತಗಳ ಬಗ್ಗೆ ಅರಿವು ಮೂಡಿಸಲಿ. ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದಾಗ ಸಿ.ಟಿ.ರವಿ ಎಲ್ಲಿ ಅಡಗಿ ಕುಳಿತಿದ್ದರು’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ನೀತಿ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಮಾತನಾಡಿ, ‘ಹಿಂದೂ ನಾವೆಲ್ಲ ಒಂದು ಎನ್ನುವ ಹಿಂದುತ್ವವಾದಿಗಳಿಂದ ದಲಿತರ ಮೇಲೆ ದೌರ್ಜನ್ಯ ನಡೆದಾಗ ಸಿ.ಟಿ.ರವಿ ಅವರ ಬಾಯಿಗೆ ಬೀಗ ಹಾಕಿಕೊಂಡಿರುತ್ತಾರೆ.

ಹಿಂದುತ್ವದ ಜಾತಿ ಹೆಸರಿನಲ್ಲಿ ಸಮಾಜದಲ್ಲಿ ನಿರ್ಮಾಣಗೊಂಡ ಶ್ರೇಣಿಕೃತ ವ್ಯವಸ್ಥೆಯ ವಿರುದ್ಧವೇ ಬಾಬಾ ಸಾಹೇಬ್ ಅಂಬೇಡ್ಕರ್ ಬದುಕಿನುದ್ದಕ್ಕೂ ಹೋರಾಟ ಮಾಡಿದ್ದಾರೆ. ಅದೇ ಹಿಂದುತ್ವ ಪರಿಪಾಲಿಸುವ ಬಿಜೆಪಿಯವರು ಇಂದು ಮತಕ್ಕಾಗಿ ಅಂಬೇಡ್ಕರ್ ಚಿತ್ರ ಇಟ್ಟುಕೊಂಡಿದ್ದಾರೆ ಎಂಬುದನ್ನು ಜನ ಅರಿತಿದ್ದಾರೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಆಲ್ಲೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹುಣಸೇಮಕ್ಕಿ ಲಕ್ಷ್ಮಣ, ತಾಲ್ಲೂಕು ಕೆಡಿಪಿ ಸದಸ್ಯ ಲಕ್ಕಾ ಸಂತೋಷ್, ಮುಖಂಡ ದಿವಾಕರ್ ಉಪಸ್ಥಿತರಿದ್ದರು.

C.T. Ravi remembers Dalitism after defeat

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಮದ್ಯದ ದರ ಶೇ.30 ಹೆಚ್ಚಳ

ಬೆಂಗಳೂರು: ಮದ್ಯದಲ್ಲಿನ ಆ‌ಲ್ಕೋಹಾಲ್ ಪ್ರಮಾಣ ಆಧರಿಸಿ ತೆರಿಗೆ ವಿಧಿಸುವ ಹೊಸ ಅಬಕಾರಿ ನೀತಿಯು ರಾಜ್ಯದಲ್ಲಿ ಅಧಿಕೃತವಾಗಿ ಜಾರಿಯಾಗಿದ್ದು, ಇದರೊಂದಿಗೆ ಜನಸಾಮಾನ್ಯರು ಬಳಸುವ ಅಗ್ಗದ ಮದ್ಯಗಳ ಬೆಲೆ ಶೇ.30ರಷ್ಟು ದುಬಾರಿಯಾಗಲಿದೆ. ಪ್ರೀಮಿಯಂ ಮತ್ತು...

ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ

ಚಿಕ್ಕಮಗಳೂರು: ಅಪರೂಪದ ವನ್ಯಜೀವಿಯಾದ ಮಣ್ಣುಮುಕ್ಕ ಹಾವು (Red Sand Boa) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಗರದ...

Related Articles

ವಿದ್ಯುತ್ ತಂತಿ ತಗುಲಿ ರೈತನ ಧಾರುಣ ಸಾವು

ಕಡೂರು: ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರದೃಷ್ಟಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು...

ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ

ಎನ್.ಆರ್. ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನರಸಿಂಹರಾಜಪುರ...

ಲಾರಿ ಪಂಚರ್ ಹಾಕುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ನಗರದ 60 ಅಡಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿಗೆ ಪಂಚರ್ ಹಾಕುತ್ತಿದ್ದ...

ಸಂಬಂಧಿಕರ ಮನೆಗೆ ಹೊರಟ ಯುವಕ ರಸ್ತೆ ಅಪಘಾತದಲ್ಲಿ ಸಾವು

ಶೃಂಗೇರಿ: ಪೊಲೀಸ್‌ ಠಾಣಾ ವ್ಯಾಪ್ತಿಯ ಸುಂಕದಮಕ್ಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ಬೈಕ್ ಅಪಘಾತ ಸಂಭವಿಸಿ ಪ್ರದೀಪ್...