Home namma chikmagalur ವಾಸಿಸುವವನೇ ಮನೆಯೊಡೆಯ ಯೋಜನೆಯ ಸದುಪಯೋಗಕ್ಕೆ ಕರೆ
namma chikmagalurchikamagalurHomeLatest News

ವಾಸಿಸುವವನೇ ಮನೆಯೊಡೆಯ ಯೋಜನೆಯ ಸದುಪಯೋಗಕ್ಕೆ ಕರೆ

Share
Share

ಚಿಕ್ಕಮಗಳೂರು: ಬಡವರು ಹಾಗೂ ಶೋಷಿತ ವರ್ಗದ ಕುಟುಂಬಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುನ್ನಲೆಗೆ ಬರಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು.

ಅವರು ಇಂದು ಬಾಣೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯಸರ್ಕಾರದ ವಿಶೇಷ ಯೋಜನೆ ವಾಸಿಸುವವನೇ ಮನೆಯ ಒಡೆಯ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ ಮಾತನಾಡಿದರು.

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅಧಿಕಾರವಧಿಯಲ್ಲಿ ಉಳುವವನೇ ಭೂಮಿ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ಹಕ್ಕುಪತ್ರ ನೀಡಿದ ಮಾದರಿಯಲ್ಲೇ ರಾಜ್ಯಸರ್ಕಾರ ವಾಸಿಸುವವನೇ ಮನೆಯ ಒಡೆಯ ಯೋಜನೆ ಜಾರಿಮಾಡಿ ಬಡವರಿಗೆ ಹಕ್ಕುಪತ್ರ ನೀಡಲು ಮುಂದಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣಭೈರೇಗೌಡ ಶಾಸಕರ ನೇತೃತ್ವದಲ್ಲಿ ಈ ಯೋಜನೆಯಡಿ ಗ್ರಾಮಗಳಲ್ಲಿ ಬಡವರು ವಾಸಿಸುವ ಫಲಾನುಭವಿಗಳನ್ನು ಗುರ್ತಿಸಿ ಹಕ್ಕುಪತ್ರಗಳನ್ನು ನೀಡುತ್ತಿರುವ ಜೊತೆಗೆ ಕಂದಾಯ ಗ್ರಾಮ ಮತ್ತು ಕಂದಾಯ ಉಪಗ್ರಾಮಗಳನ್ನು ಆಯ್ಕೆಮಾಡಲಾಗಿದೆ ಎಂದರು.

ಸರ್ಕಾರದ ಈ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಕುಟುಂಬದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಕಿವಿಮಾತು ಹೇಳಿದರು.

ಭದ್ರಾ ಉಪಕಣಿವೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಧ್ಯದಲ್ಲೇ ಗುದ್ದಲಿ ಪೂಜೆ ನೆರವೇರಿಸಲಿದ್ದು, ನಂತರ ಈ ಭಾಗದ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಯಾಗಲಿದೆ ಎಂದು ಭರವಸೆ ನೀಡಿದರು.

ರೈತರ ತೆಂಗು, ಅಡಿಕೆ, ಶುಂಠಿ, ಟೊಮ್ಯಾಟೋ ಮುಂತಾದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿದಾಗ ರೈತರು ಹಾಗೂ ರೈತಕಾರ್ಮಿಕರು ಸಂತೋಷವಾಗಿರುತ್ತಾರೆಂದು ಹೇಳಿದರು.

ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿರುವ ರಾಜ್ಯಸರ್ಕಾರ ಬಡವರ, ಶೋಷಿತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢಗೊಳಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಣೂರು ಗ್ರಾ.ಪಂ ಅಧ್ಯಕ್ಷೆ ಸುನಂದಮ್ಮ, ಸದಸ್ಯೆ ಉಮಾಭಾರ್ಗವ್, ಅಜ್ಜಯ್ಯ, ನವೀನ್, ಮಂಜುಳ, ಮಮತ, ಯಶೋಧ, ಕಡೂರು ತಹಶೀಲ್ದಾರ್ ಪೂರ್ಣಿಮ, ಇಓ ಪ್ರವೀಣ್, ರಾಜಸ್ವ ನಿರೀಕ್ಷಕ ರವಿ, ತಾ.ಪಂ ಮಾಜಿ ಸದಸ್ಯ ಧನಂಜಯ್ ಉಪಸ್ಥಿತರಿದ್ದರು.

Call for better utilization of the resident-owned-house scheme

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...