Home namma chikmagalur chikamagalur ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು
chikamagalurHomeLatest Newsnamma chikmagalur

ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು

Share
Share

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಮೇಲೆ ಕಣ್ಣಿಡಲು ಅಳವಡಿಸಲಾಗಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಖದೀಮರು ಹೊತ್ತೊಯ್ದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಶಾಖೆಯ ಪಾದಮನೆ ಗಸ್ತು ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಹುಲಿ ಗಣತಿಯ ಅತ್ಯಂತ ಪ್ರಮುಖ ಕಾರ್ಯಾಚರಣೆಗಾಗಿ ಅರಣ್ಯ ಇಲಾಖೆಯಿಂದ ಒಟ್ಟು ನಾಲ್ಕು ಕ್ಯಾಮೆರಾ ಟ್ರ್ಯಾಪ್‌ಗಳನ್ನು ನೀಡಲಾಗಿತ್ತು. ಈ ಪೈಕಿ ಕಾಮೇನಹಳ್ಳಿ ಮೀಸಲು ಅರಣ್ಯದ ಸರ್ವೆ ನಂಬರ್ 1ರ ವಲಯದಲ್ಲಿ ಅಳವಡಿಸಲಾಗಿದ್ದ ಎರಡು ದುಬಾರಿ ಕ್ಯಾಮೆರಾಗಳನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ.

ಗಸ್ತು ಅರಣ್ಯ ಪಾಲಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗೀತಾ ಬಿ.ಎಸ್. ಅವರು ಕ್ಯಾಮೆರಾಗಳನ್ನು ಪರಿಶೀಲಿಸಲು ತೆರಳಿದಾಗ ಈ ಕಳ್ಳತನ ನಡೆದಿರುವುದು ಸ್ಪಷ್ಟವಾಗಿದೆ. ಕಾಣೆಯಾದ ಕ್ಯಾಮೆರಾಗಳಿಗಾಗಿ ಅರಣ್ಯ ಸಿಬ್ಬಂದಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

ಕಳವಾಗಿರುವ ಎರಡು ಕ್ಯಾಮೆರಾಗಳ ಒಟ್ಟು ಮೌಲ್ಯ ಸುಮಾರು 40,000 ರೂಪಾಯಿಗಳಾಗಿದ್ದು, ಈ ಕುರಿತು ಅರಣ್ಯ ಪಾಲಕಿ ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮೀಸಲು ಅರಣ್ಯದೊಳಗೆ ನುಗ್ಗಿ ಇಲಾಖೆಯ ಕ್ಯಾಮೆರಾಗಳನ್ನೇ ಕದ್ದ ಕಳ್ಳರ ಪತ್ತೆಗಾಗಿ ಜಾಲ ಬೀಸಿದ್ದಾರೆ.

Camera stolen in Kamenahalli reserve forest

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಹಕರಿಗೆ ಬಡ್ಡಿ ಸಹಿತ ವಿಮಾ ಕಂತು ಮರಳಿಸುವಂತೆ ಆದೇಶ

ಚಿಕ್ಕಮಗಳೂರು : ಖಾತೆದಾರರ ಒಪ್ಪಿಗೆ ಪಡೆಯದೆ ಅವರ ಖಾತೆಯಿಂದ ಹಣ ಮುರಿದುಕೊಂಡು ವಿಮಾ ಪಾಲಿಸಿ ಖರೀದಿಸಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಕೋಟಕ್ ಮಹೀಂದ್ರಾ ಓಲ್ಡ್ ಮ್ಯೂಚ್ಯುಯಲ್ ಲೈಫ್ ಇನ್‌ಶೂರೆನ್ಸ್ ಲಿಮಿಟೆಡ್...

ಲೋಕಾಯುಕ್ತ ಬಲೆಗೆ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು

ಚಿಕ್ಕಮಗಳೂರು: ರೈತನೊಬ್ಬನಿಂದ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ನಡೆದಿದೆ. ತರೀಕೆರೆ ತಾಲೂಕಿನ...

Related Articles

“ಶಿವಾನಂದ ನೀಲಣ್ಣವ‌ರ್ ಕೊಡುಗೆ” ನಾಮಫಲಕ ತೆರವು

ಕಡೂರು: ಅನಧಿಕೃತವಾಗಿ ಬಡ್ಡಿ ವ್ಯವಹಾರ ಮಾಡಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು...

ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ ಸಿಲುಕಿ ಬಾಲಕಿ ಸಾವು

ಶೃಂಗೇರಿ: ಬೇಸಿಗೆ ರಜಾ ಕಳೆಯಲು ಅಜ್ಜಿ ಮನೆಗೆ ಬಂದ ಸಂದರ್ಭದಲ್ಲಿ ಬಾಲಕಿಯೊಬ್ಬಳು ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ...

ಪರವಾನಗಿ ಇಲ್ಲದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕು ವಶ

ಚಿಕ್ಕಮಗಳೂರು: ಪರವಾನಗಿ ಇಲ್ಲದೆ ಮನೆಯಲ್ಲಿ ಇಟ್ಟುಕೊಂಡಿದ್ದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕನ್ನು (ಎಸ್‌ಬಿಎಂಎಲ್) ಆಲ್ಲೂರು ಪೊಲೀಸರು...

ಶೃಂಗೇರಿಯ ಅಂಚೆ ಮತಗಳ ಎಣಿಕೆ-ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

ಚಿಕ್ಕಮಗಳೂರು: ಜಿಲ್ಲಾಧಿಕಾರಿಯಾಗಿದ್ದ ಎನ್.ಎಂ. ನಾಗರಾಜ್ ಅವರ ದಿಢೀರ್ ವರ್ಗಾವಣೆ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಲೆನಾಡು,...