Home namma chikmagalur chikamagalur ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಲು ಕ್ಯಾನ್ ಅದಾಲತ್
chikamagalurHomeLatest Newsnamma chikmagalur

ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಲು ಕ್ಯಾನ್ ಅದಾಲತ್

Share
Share

ಚಿಕ್ಕಮಗಳೂರು: ಬ್ಯಾಂಕ್ ಸುಸ್ತಿದಾರ ಬೆಳೆಗಾರರ ಅನುಕೂಲಕ್ಕಾಗಿ ಕೆನರಾ ಬ್ಯಾಂಕ್ ಕಾಫಿ ಬೆಳೆಯುವ ಜಿಲ್ಲೆಗಳ ಆಯ್ದ ಕೆಲವು ಶಾಖೆಗಳಲ್ಲಿ ಕ್ಯಾನ್ ಅದಾಲತ್ ನಡೆಸುತ್ತಿದ್ದು, ಸುಸ್ತಿದಾರ ಬೆಳೆಗಾರರು ಈ ಅವಕಾಶ ಸದುಪಯೋಗಪಡಿಸಿಕೊಂಡು ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಬೇಕೆಂದು ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಅವರು, ಕಾಫಿ ಬೆಳೆಗಾರರು ಕಳೆದ ಕೆಲವು ವರ್ಷಗಳಿಂದ ತಲೆದೋರಿದ ವಿವಿಧ ಸಮಸ್ಯೆಗಳಿಂದಾಗಿ ಬ್ಯಾಂಕ್ ಸಾಲ ತೀರಿಸಲಾಗದೆ, ಸಂಕಷ್ಟಕ್ಕೆ ಸಿಲುಕಿ ಕೆಲವು ಖಾತೆದಾರರ ಆಸ್ತಿ ಹರಾಜು ಹಂತಕ್ಕೆ ಹೋಗಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ನಿರಂತರ ಚರ್ಚೆ ನಡೆಸಿದ್ದರ ಫಲವಾಗಿ ಈಗಾಗಲೇ ಬ್ಯಾಂಕ್‌ಗಳಲ್ಲಿ ಒನ್ ಟೈಮ್ ಸೆಟ್ಲ್‌ಮೆಂಟ್ ಮೂಲಕ ರಿಯಾಯ್ತಿ ದರದಲ್ಲಿ ಸಾಲ ಮರುಪಾವತಿಗೆ ಅವಕಾಶ ನೀಡಲಾಗಿತ್ತು ಎಂದವರು ಹೇಳಿದ್ದಾರೆ.

ಹೀಗಿದ್ದರೂ ಕೆಲವು ಬೆಳೆಗಾರರು ವೈಯಕ್ತಿಕ ಕಾರಣಗಳಿಂದ ಅವಕಾಶ ವಂಚಿತರಾಗಿದ್ದರು. ಹಾಗಾಗಿ ಮತ್ತೊಮ್ಮೆ ಕೆನರಾ ಬ್ಯಾಂಕ್ ಕಾರ್ಯ ನಿರ್ವಾಹಕ ನಿರ್ದೇಶಕರಾದ ಹಾರ್ದಿಕ್ ಸಿಂಗ್ ಅಹ್ವಾಲಿಯ ಅವರನ್ನು ಖುದ್ದಾಗಿ ಭೇಟಿ ಮಾಡಿ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಗಮನಕ್ಕೆ ತಂದು ಒನ್‌ಟೈಮ್ ಸೆಟ್ಲ್‌ಮೆಂಟ್‌ಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿದ ಕೆನರಾ ಬ್ಯಾಂಕ್ ಕಾರ್ಯ ನಿರ್ವಾಹಕರ ನಿರ್ದೇಶಕರು ಹಲವು ಕಡೆಗಳ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಕ್ಯಾನ್ ಅದಾಲತ್‌ಗೆ ಅವಕಾಶ ನೀಡಿದ್ದಾರೆ. ಈ ಅವಕಾಶವನ್ನು ಕಾಫಿ ಬೆಳೆಗಾರರು ಸದುಪಯೋಗಪಡಿಸಿಕೊಂಡು ಸಾಲದಿಂದ ಮುಕ್ತರಾಗುವಂತೆ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಅವರು ವಿನಂತಿಸಿ ದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಆಗಸ್ಟ್ ೩ ರಂದು, ಕಳಸದಲ್ಲಿ ಆ.೪ ರಂದು, ಚಿಕ್ಕಮಗಳೂರಿನಲ್ಲಿ ಆ.೪ ಮತ್ತು ೫ ರಂದು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಆ.೪ ರಂದು, ಬೇಲೂರಿನಲ್ಲಿ ಆ.೫ ರಂದು ಹಾಗೂ ಹಾಗೂ ಹಾಸನದಲ್ಲಿ ಆ.೫ ಮತ್ತು ೬ ರಂದು, ಕೊಡಗು ಜಿಲ್ಲೆಯ ಕುಶಾಲನಗದಲ್ಲಿ ಆ.೩ ರಂದು, ಗೋಣಿಕೊಪ್ಪಲಿನಲ್ಲಿ ಆ.೪ ರಂದು, ಮಡಿಕೇರಿಯಲ್ಲಿ ೪ ಮತ್ತು ೫ ರಂದು ಮಂಗಳೂರು ಮತ್ತು ದಾವಣಗೆರೆಯಲ್ಲಿ ಆ.೭ ರಂದು ಕ್ಯಾನ್ ಅದಾಲತ್ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜುಲೈ ೧೫ ರಂದೇ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಹಾಗೂ ಸಿಇಒ ಕೂರ್ಮರಾವ್ ಅವರು ಕೆನರಾ ಬ್ಯಾಂಕ್ ಕಾರ್ಯ ನಿರ್ವಾಹಕ ನಿರ್ದೇಶಕರಾದ ಹಾರ್ದಿಕ್ ಸಿಂಗ್ ಅಹ್ವಾಲಿಯ ಅವರನ್ನು ಭೇಟಿ ಮಾಡಿ ಹವಾಮಾನ ವೈಪರೀತ್ಯ, ಕೀಟ ಬಾಧೆ, ಕಾರ್ಮಿಕರ ಸಮಸ್ಯೆ, ಹಾಗೂ ಬೆಲೆ ಏರಿಳಿತದಿಂದ ಬೆಳೆಗಾರರು ಅನುಭವಿಸುತ್ತಿರುವ ಕಷ್ಟನಷ್ಟಗಳ ಬಗ್ಗೆ ಗಮನ ಸೆಳೆದಿದ್ದು, ಆ ಸಂದರ್ಭದಲ್ಲಿ ಬೆಳೆಗಾರರಿಗೆ ಒನ್‌ಟೈಂ ಸೆಟಲ್ಮೆಂಟ್‌ನಲ್ಲಿ ಉತ್ತಮ ರಿಯಾಯಿತಿ ನೀಡುವ ಮೂಲಕ ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Can Adalat to get rid of bank debt

Share

Leave a comment

Leave a Reply

Your email address will not be published. Required fields are marked *

Don't Miss

ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹಿಸಿ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪ್ರತಿಭಟನೆ

ಚಿಕ್ಕಮಗಳೂರು: ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪ್ರಹಾರವನ್ನು ಖಂಡಿಸಿರುವ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪಕ್ಷವು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಕೇಂದ್ರದ ಶಿಕ್ಷಣ ಸಚಿವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ...

ಕಾಫಿ ತೋಟದ ಮಾಲೀಕ ಹಾರಿಸಿದ ಗುಂಡೇಟಿನಿಂದ ಬಾಲಕನಿಗೆ ಗಾಯ

ಮೂಡಿಗೆರೆ: ಕೂಲಿ ಹಣದ ವಿಚಾರವಾಗಿ ಕಾಫಿ ತೋಟದ ಮಾಲೀಕ ಹಾಗೂ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದಾಗ, ತೋಟದ ಮಾಲೀಕ ಹಾರಿಸಿದ ಗುಂಡು 4 ವರ್ಷದ ಬಾಲಕನ ತಲೆಗೆ ತಾಗಿದ ಘಟನೆ...

Related Articles

ತಾಕತ್ತಿದ್ದರೆ ಸಿ.ಟಿ. ರವಿಯನ್ನು ತಡೆಯಿರಿ

  ಚಿಕ್ಕಮಗಳೂರು, ಜು.30: ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ಟಿ. ರವಿ...

ಜಲಯೋಗ ಸಾಧನೆಯಲ್ಲಿ ವಕೀಲ ವಿ.ಕೆ.ರಘು ವಿಶ್ವ ದಾಖಲೆ

ಚಿಕ್ಕಮಗಳೂರು: ನಗರದ ವಕೀಲ ವಿ.ಕೆ.ರಘು ಅವರು ಜಲಯೋಗ ಸಾಧನೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ...

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ...

ಅಂಚೆ ಮತ ಮರು ಎಣಿಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ

ಶೃಂಗೇರಿ: ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ...