Home namma chikmagalur chikamagalur ಕಾರು – ಬೈಕ್ ನಡುವೆ ನಡೆದ ಡಿಕ್ಕಿ-ಬೈಕ್‌ ಸವಾರ ಸ್ಥಳದಲ್ಲೇ ಸಾವು
chikamagalurHomeLatest Newsnamma chikmagalur

ಕಾರು – ಬೈಕ್ ನಡುವೆ ನಡೆದ ಡಿಕ್ಕಿ-ಬೈಕ್‌ ಸವಾರ ಸ್ಥಳದಲ್ಲೇ ಸಾವು

Share
Share

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು-ಬೀರೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಡೂರು ಮತ್ತು ಬೀರೂರು ನಡುವಿನ ಲಕ್ಷ್ಯ ಕನ್ವೆನ್ನನ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಬೀರೂರಿನ ತೀರ್ಥ ಎಂದು ಗುರುತಿಸಲಾಗಿದೆ.

ಕಾರು ಚಾಲಕನ ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಘಟನೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಬಸಕ್ಕೆ ತೀರ್ಥ ಅವರ ದೇಹಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯು ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Car-bike collision leaves biker dead on the spot

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...