Home namma chikmagalur ಕಾರು‌- ಲಾರಿ ನಡುವೆ ಡಿಕ್ಕಿ‌ : ರಸ್ತೆ ಬದಿಯಲ್ಲಿ‌ ನಿಂತಿದ್ದ ವ್ಯಕ್ತಿ ಸಾವು
namma chikmagalurchikamagalurCrime NewsHomeLatest News

ಕಾರು‌- ಲಾರಿ ನಡುವೆ ಡಿಕ್ಕಿ‌ : ರಸ್ತೆ ಬದಿಯಲ್ಲಿ‌ ನಿಂತಿದ್ದ ವ್ಯಕ್ತಿ ಸಾವು

Share
Share

ಮೂಡಿಗೆರೆ: ಗೋಣಿಬೀಡು ಗ್ರಾಮದ ಕಸ್ಕೇಬೈಲ್ ಸಮೀಪ ಭಾನುವಾರ ಸಂಜೆ ಕಾರು‌ ಹಾಗೂ ತರಕಾರಿ‌ ಸಾಗಿಸುತ್ತಿದ್ದ ಲಾರಿ ನಡುವೆ ಡಿಕ್ಕಿ‌ ಸಂಭವಿಸಿದ್ದು, ರಸ್ತೆ ಬದಿಯಲ್ಲಿ‌ ನಿಂತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಸುಧಾಕರ್ (35) ಮೃತಪಟ್ಟವರು. ಇವರು, ಗೋಣಿಬೀಡು ಹೋಬಳಿಯ ಚಿನ್ನಿಗಾ ಗ್ರಾ.ಪಂ. ಅಟೆಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕಸ್ಕೇಬೈಲ್ ಗ್ರಾಮದ ಚರ್ಚ್ ಹಾಲ್ ಬಳಿ ಸುಧಾಕರ್ ರಸ್ತೆ ಬದಿ ಬಸ್‌ ಗಾಗಿ ಕಾಯುತ್ತಾ ನಿಂತಿದ್ದಾಗ, ರಾಷ್ಟ್ರೀಯ ಹೆದ್ದಾರಿ 73ರಲ್ಲಿ ‌ವೇಗವಾಗಿ ಬಂದ ತರಕಾರಿ ಸಾಗಾಟದ ಲಾರಿಯು ಎದುರಿ ನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದು ಸುಧಾಕರ್ ಮೇಲೆ ಹರಿದಿದೆ. ಇದರಿಂದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದ್ದು, ಮುಂದಿನ ಚಕ್ರಗಳು ಕಿತ್ತು ಬಂದಿವೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ‌ ಅಸ್ತವ್ಯಸ್ತವಾಗಿತ್ತು.‌ ಸ್ಥಳಕ್ಕೆ ಬಂದ ಗೋಣಿಬೀಡು ಪೊಲೀಸರು ವಾಹನಗಳನ್ನು ‌ತೆರವು ಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಅಪಘಾತದ ಘಟನೆಗೆ ಸಂಬಂಧಿಸಿದಂತೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಧಾಕರ್ ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದು, ತಿಂಗಳ‌ ಹಿಂದಷ್ಟೇ ಮನೆಯ ಗೃಹಪ್ರವೇಶ ನಡೆಸಿದ್ದರು. ಕುಟುಂಬಸ್ಥರ ಆಕ್ರಂದನ‌ ಮುಗಿಲು ಮುಟ್ಟಿತ್ತು.

Car-lorry collision: Man standing on the side of the road dies

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...