Home Crime News ಮಗನ ವಿರುದ್ಧವೇ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಅಪ್ಪ
Crime NewsHomeLatest Newsnamma chikmagalurTarikere

ಮಗನ ವಿರುದ್ಧವೇ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಅಪ್ಪ

Share
Share

ತರೀಕೆರೆ: ಬೈಕ್ ರೈಡಿಂಗ್ ಎಂದರೆ ಇಂದಿನ ಯುವಕರಿಗೆ ಎಲ್ಲಿಲ್ಲದ ಕ್ರೇಜ್. ಆದರೆ ಆ ವೇಗದ ಮಜಾ ಕೆಲವೊಮ್ಮೆ ಹೆತ್ತವರಿಗೇ ತಲೆ ನೋವು ತರುತ್ತದೆ ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತಂದೆ ಬುದ್ದಿಮಾತು ಹೇಳಿದರೂ ಕೇಳದೆ ಅತಿವೇಗವಾಗಿ ಬೈಕ್ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಮಗನ ವಿರುದ್ಧವೇ ತಂದೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಮೇ 5ರಂದು ರಾಕೇಶ್ ಎಂಬ ಯುವಕ ತನ್ನ ತಂದೆಯನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಸ್ಟಾರ್ ಸಿಟಿ ಬೈಕ್ ಏರಿ ಹೊರಟಿದ್ದನು. ಮಗನ ಬೈಕ್ ಚಾಲನೆಯ ಸ್ಪೀಡ್ ನೋಡಿ ಗಾಬರಿಯಾದ ತಂದೆ, “ಗಾಡಿಯನ್ನು ಸ್ವಲ್ಪ ನಿಧಾನವಾಗಿ ಓಡಿಸು ಮಗನೇ..” ಎಂದು ಪದೇ ಪದೇ ಗೋಗರೆದರೂ ವೇಗದ ಅಮಲಿನಲ್ಲಿದ್ದ ಮಗ ಮಾತ್ರ ತಂದೆಯ ಮಾತನ್ನು ಗಾಳಿಗೆ ತೂರಿ ಗಾಡಿಯನ್ನು ಮತ್ತಷ್ಟು ಜೋರಾಗಿ ಮುನ್ನುಗ್ಗಿಸಿದ್ದಾನೆ.

ಬೈಕ್‌ ಹಾಳೂರು ಬಸವೇಶ್ವರ ದೇವಸ್ಥಾನದ ಬಳಿಯ ರಸ್ತೆಗೆ ಬರುತ್ತಿದ್ದಂತೆ ಹಠಾತ್ತನೆ ನಾಯಿಯೊಂದು ಅಡ್ಡ ಬಂದಿದೆ. ಅತಿವೇಗದಲ್ಲಿದ್ದ ಕಾರಣ ರಾಕೇಶ್ ಗಾಬರಿಯಿಂದ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯಲ್ಲೇ ಸ್ಕಿಡ್ ಆಗಿದ್ದು, ಇಬ್ಬರೂ ಕೆಳಗೆ ಬಿದ್ದಿದ್ದಾರೆ. ರಾಕೇಶ್ ಹೆಟ್ ಧರಿಸಿದ್ದರಿಂದ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಆದರೆ ಹೆಟ್ ಧರಿಸದೆ ಹಿಂಬದಿ ಕುಳಿತಿದ್ದ ತಂದೆಯ ಹಣೆ, ಮೂಗು ಹಾಗೂ ದವಡೆ ಹಲ್ಲಿಗೆ ತೀವ್ರ ಗಾಯಗಳಾಗಿತ್ತು. ಹೀಗಾಗಿ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಿದ್ದು ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ 13 ದಿನ ಚಿಕಿತ್ಸೆ ಪಡೆದು ಮನೆಗೆ ಮರಳಿದ ತಂದೆಗೆ ಮಗನ ಬೇಜವಾಬ್ದಾರಿತನದ ಮೇಲೆ ತೀವ್ರ ಆಕ್ರೋಶ ಮೂಡಿದೆ.

ಮಗನೇ ಆದರೂ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು, ಇಲ್ಲದಿದ್ದರೆ ಮುಂದೆ ದೊಡ್ಡ ಅಪಾಯ ತಂದುಕೊಳ್ಳುತ್ತಾನೆ ಎಂದು ನಿರ್ಧರಿಸಿದ ತಂದೆ, ಕುಟುಂಬಸ್ಥರೊಂದಿಗೆ ಚರ್ಚಿಸಿ ತರೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಂದೆಯ ದೂರಿನ ಮೇರೆಗೆ ಪೊಲೀಸರು ಮಗ ರಾಕೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Case against son who caused accident by speeding on bike

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯುವಕರ ತಂಡವೊಂದು ಖಾಸಗಿ ಓಪನ್ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳನ್ನು ಕಾಡಿರುವ ಆರೋಪ ಕೇಳಿಬಂದಿದ್ದು,...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಡಿ.ರಾಮೇಗೌಡ ಕಲ್ಲಹಳ್ಳಿ ಅವರ ಆಯ್ಕೆ ಕ್ರಮಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ...

Related Articles

ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ

ಮೂಡಿಗೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ....

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು...

ಆಲ್ದೂರು ಸಮೀಪ ಅಪರಿಚಿತ ವ್ಯಕ್ತಿ ಶವ ಪತ್ತೆ

ಚಿಕ್ಕಮಗಳೂರು: ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಮಕ್ಕಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ...