Home namma chikmagalur chikamagalur ದನ ಅಕ್ರಮ ಸಾಗಾಟ: ಪ್ರಕರಣ ದಾಖಲು
chikamagalurHomeLatest Newsnamma chikmagalur

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

Share
Share

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ ವಯಸ್ಸಿನ ಹೋರಿಯನ್ನು ಪಿಕಪ್ ವಾಹನದಲ್ಲಿ ಶನಿವಾರ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುತ್ತಿದ್ದನ್ನು ಪೊಲೀಸರು ಪತ್ತೆಮಾಡಿದ್ದಾರೆ.

ಹೋರಿಯ ಕಾಲುಗಳನ್ನು ಕಟ್ಟಿ ಟಾರ್ಪಾಲಿನಿಂದ ಮುಚ್ಚಿ ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರನ್ನು ಕಂಡು ಒಬ್ಬ ಆರೋಪಿ ವಾಹನದಿಂದ ಜಿಗಿದು ಓಡಿಹೋಗಿದ್ದ. ವಾಹನದಲ್ಲಿದ್ದ ಆರೋಪಿಗಳಾದ ಮಂಜುನಾಥ್, ಕಿರಣ್, ಮಹಮ್ಮದ್ ಮುಬಾರಕ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಹೋರಿಯನ್ನು ಸಬ್ಬೇನಹಳ್ಳಿಯಿಂದ ಕಸಾಯಿಖಾನೆಗೆ ಸಾಗಾಟ ಮಾಡಲು ಕೊಂಡೊಯ್ಯುತ್ತಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

ಪೊಲೀಸರು ವಾಹನ ಮತ್ತು ಹೋರಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೋರಿ ₹15 ಸಾವಿರ ಮೌಲ್ಯದ್ದಾಗಿದೆ. ಹೋರಿಯನ್ನು ಇಂದಾವರದಲ್ಲಿರುವ ಗೋಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ಪಿಎಸ್‌ಐ ರವಿ ಜಿ.ಎ. ಮಾಹಿತಿ ನೀಡಿದರು.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ರವಿ, ಸಂದೀಪ್ ಎಂ.ಜಿ., ಪ್ರಸನ್ನ ಎಂ.ಎಚ್., ರಘು ಎಲ್.ಎಲ್., ಅಣ್ಣಪ್ಪ ಭಾಗವಹಿಸಿದ್ದರು.

Cattle smuggling: Case registered

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ: 9.20 ಲಕ್ಷ ಗಣತಿ ನಮೂನೆಗಳ ವಿತರಣೆ

ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Intensive Revision...