Home namma chikmagalur chikamagalur ಡಿ. 20ರಿಂದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಶತಮಾನೋತ್ಸವ
chikamagalurHomeLatest Newsnamma chikmagalur

ಡಿ. 20ರಿಂದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಶತಮಾನೋತ್ಸವ

Share
Share

ಚಿಕ್ಕಮಗಳೂರು: ದೇಶದ ಏಕೈಕ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಇದೀಗ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ೧೯೨೫ರಲ್ಲಿ ಬಾಳೆಹೊನ್ನೂರು ಸಮೀಪದ ಸೀಗೋಡಿನಲ್ಲಿ ಆರಂಭಗೊಂಡಿರುವ ಸಂಸ್ಥೆ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ. ೨೦ರಿಂದ ೨೨ರವರೆಗೆ ಶತಮಾನೋತ್ಸವ ಕಾರ್ಯಕ್ರಮವನ್ನು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ತಿಳಿಸಿದರು.

ನಗರದ ಕಾಫಿ ಮಂಡಳಿಯ ಮ್ಯೂಸಿಯಂನ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೭ ಲಕ್ಷ ಟನ್‌ಗಳ ಅದ್ಭುತ ಭವಿಷ್ಯಕ್ಕೆ ೭ ಚಿನ್ನದ ಬೀಜಗಳು ಎಂಬ ಧ್ಯೇಯದೊಂದಿಗೆ ಶತಮಾನೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಭಾರತದಲ್ಲಿ ೩.೬೭ ಲಕ್ಷ ಟನ್ ಕಾಫಿ ಉತ್ಪಾದನೆ ಮಾಡಲಾಗುತ್ತಿದೆ. ಆದರೆ ನಮ್ಮ ಗುರಿ ಇರುವುದು ವಾರ್ಷಿಕವಾಗಿ ಭಾರತದಲ್ಲಿ ಕನಿಷ್ಟ ೭ ಲಕ್ಷ ಟನ್ ಕಾಫಿ ಉತ್ಪಾದನೆ ಮಾಡಬೇಕು ಎಂಬುದಾಗಿದೆ. ಇದೇ ಹಿನ್ನೆಲೆಯಲ್ಲಿ ೭ ಲಕ್ಷ ಟನ್‌ಗಳ ಅದ್ಭುತ ಭವಿಷ್ಯಕ್ಕೆ ೭ ಚಿನ್ನದ ಬೀಜಗಳು ಎಂಬ ಧ್ಯೇಯ ಅಳವಡಿಸಿಕೊಳ್ಳಲಾಗಿದೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿಯೂ ಇದೇ ವಿಷಯವಾಗಿ ವಿವಿಧ ಗೋಷ್ಠಿಯಗಳಲ್ಲಿ ಚರ್ಚೆ ನಡೆಯಲಿದೆ ಎಂದು ವಿವರಿಸಿದರು.

ಸಿಸಿಆರ್‌ಐ ಶತಮಾನೋತ್ಸವ ಕಾರ್ಯಕ್ರಮದ ವೇಳೆ ಎರಡು ಪ್ರಮುಖ ಕಾಫಿ ತಳಿಗಳನ್ನು ಪರಿಚಯಿಸಲಾಗುತ್ತದೆ. ಎರಡೂ ಅರೇಬಿಕಾ ತಳಿಗಳಾಗಿದ್ದು, ಇದರಲ್ಲಿ ಒಂದು ಬೋರರ್ ನಿರೋಧಕವಾಗಿದೆ. ಇದಲ್ಲದೆ ಕಾಫಿ ಇಳುವರಿ ಹೆಚ್ಚಿಸುವ ಕುರಿತು ಸಂಶೋಧನೆ ನಡೆದಿವೆ. ಈ ಬಗ್ಗೆಯೂ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಾಳೆಹೊನ್ನೂರಿನ ಸಮೀಪ ಇರುವ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಆವರಣದಲ್ಲಿ ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕನಿಷ್ಟ ೫೦ ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಕಾಫಿ ಬೆಳೆಯುವ ಪ್ರದೇಶಗಳ ಕಾಫಿ ಬೆಳೆಗಾರರು ಭಾಗವಹಿಸಲಿದ್ದಾರೆ. ಇಲ್ಲಿ ಹಲವು ಗೋಷ್ಠಿಗಳು ನಡೆಯಲಿದ್ದು, ಸ್ಥಳಾವಕಾಶದ ಕೊರತೆ ಹಿನ್ನೆಲೆಯಲ್ಲಿ ನಿಗದಿತ ಸಂಖ್ಯೆಯ ಬೆಳೆಗಾರರಷ್ಟೇ ಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಉಳಿದಂತೆ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕನಿಷ್ಟ ೫೦ ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾಫಿ ಬೆಳೆಗಾರರು ತಮ್ಮ ಕುಟುಂಬದೊAದಿಗೆ ಆಗಮಿಸಿದಲ್ಲಿ ಕಾರ್ಯಕ್ರಮ ಇನ್ನಷ್ಟು ಯಶಸ್ವಿಯಾಗಲಿದೆ ಎಂದರು.

ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕೇಂದ್ರ ವಾಣಿಜ್ಯ ಸಚಿವರಿಗೆ ಹಾಗೂ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಿದ್ದೇವೆ. ಇದಲ್ಲದೆ ರಾಜ್ಯದ ಇಂಧನ ಸಚಿವರು ಹಾಗೂ ಕಾಫಿ ಬೆಳೆಗಾರರೂ ಆಗಿರುವ ಕೆ.ಜೆ.ಜಾರ್ಜ್ ಅವರು ಶತಮಾನೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದಲ್ಲದೆ ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೂ ಆಹ್ವಾನ ನೀಡಿದ್ದೇವೆ. ಅರಣ್ಯ ಸಚಿವ ಸಮ್ಮುಖದಲ್ಲೇ ವನ್ಯಜೀವಿ ಹಾಗೂ ಮಾನವ ಸಂಘರ್ಷದ ಗೋಷ್ಠಿ ನಡೆಸುವ ಇರಾದೆಯಿದೆ ಎಂದು ವಿವರಿಸಿದರು.

ಭಾರತೀಯ ಕಾಫಿ ಮಂಡಳಿ ಸಿಇಒ ಕೂರ್ಮ ರಾವ್ ಮಾತನಾಡಿ, ಲ್ಯಾಬ್‌ನಿಂದ ಲ್ಯಾಂಡ್‌ವರೆಗೆ ಕಾಫಿ ಸಂಶೋಧನಾ ಕೇಂದ್ರದ ಕೆಲಸ ಹೇಗೆ ನಡೆದಿದೆ. ಹಾಗೂ ಲ್ಯಾಂಡ್‌ನಿAದ ಕಪ್‌ವರೆಗೆ ಕಾಫಿ ಹೇಗೆ ತಲುಪುತ್ತದೆ ಎಂಬುದನ್ನು ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಲಿದ್ದೇವೆ ಎಂದರು.

ಇದುವರೆಗೆ ಕಾಫಿ ಸಂಶೋಧನಾ ಕೇಂದ್ರ ೧೬ ತಳಿಗಳನ್ನು ಅಭಿವೃದ್ಧಿಪಡಿಸಿದೆ. ಅದರಲ್ಲಿ ೧೩ ಅರೇಬಿಕಾ ಆಗಿದ್ದರೆ, ಇನ್ನು ಮೂರು ರೊಬೋಸ್ಟಾ ಆಗಿವೆ. ಅರೆಬಿಕಾದಲ್ಲಿ ಈಗಾಗಲೇ ಚಂದ್ರಗಿರಿ ಎಲ್ಲರ ಮನೆ ಮಾತಾಗಿದೆ. ಆದರೆ ಶತಮಾನೋತ್ಸವದ ಸಂದರ್ಭದಲ್ಲಿ ಚಂದ್ರಗಿರಿಗಿAತಲೂ ಶೇ. ೧೦ರಷ್ಟು ಹೆಚ್ಚು ಇಳುವರಿ ನೀಡುವ ತಳಿ ಪರಿಚಯಿಸಲಿz್ದÉÃವೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕನಿಷ್ಟ ೪೦ ಸ್ಟಾಲ್ ತೆರೆಯುತ್ತಿದ್ದು, ಇಲ್ಲಿ ಕಾಫಿಗೆ ಸಂಬAಧಿಸಿದ ಪ್ರತಿಯೊಂದು ಮಾಹಿತಿ ನೀಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಫಿ ಸಂಶೋಧನ ಕೇಂದ್ರದ ನಿರ್ದೇಶಕ ಸೆಂಥಿಲ್ ಮತ್ತಿತರರಿದ್ದರು.

Central Coffee Research Institute Centenary Celebration from December 20

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...