Home Latest News ‘ರೈತರಿಗೆ 3 ರೂಪಾಯಿ ಚೆಕ್ ಕೊಟ್ಟು ಅವಮಾನಿಸಿದ ಕೇಂದ್ರ ಸರ್ಕಾರ’
Latest NewschikamagalurHomenamma chikmagalur

‘ರೈತರಿಗೆ 3 ರೂಪಾಯಿ ಚೆಕ್ ಕೊಟ್ಟು ಅವಮಾನಿಸಿದ ಕೇಂದ್ರ ಸರ್ಕಾರ’

Share
Share

ಚಿಕ್ಕಮಗಳೂರು: ಪ್ರಧಾನಮಂತ್ರಿ ಪಸಲ್ ಭೀಮ ಯೋಜನೆ ಅಡಿ ಮಹಾರಾಷ್ಟ್ರದ ರೈತರಿಗೆ ಕೇಂದ್ರ ಸರ್ಕಾರ ₹3, ₹2.30 ಪರಿಹಾರ ನೀಡಿದ್ದು, ಆ ಮೂಲಕ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಟೀಕಿಸಿದರು.

ರೈತರಿಗೆ ಇಷ್ಟು ಕಡಿಮೆ ಪರಿಹಾರ ನೀಡಲಾಗಿದೆ. ಈ ಘಟನೆ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಬಿಜೆಪಿ ನಾಯಕರಾಗಲಿ ಮಾತನಾಡುತ್ತಿಲ್ಲ. ಇದು ನಕಲಿ ದೇಶ ಭಕ್ತಿಯನ್ನು ಸಾರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ  ಬುಧವಾರ ಹೇಳಿದರು.

ಅತಿವೃಷ್ಟಿ ಸಂಕಷ್ಟದಲ್ಲಿ ಇರುವ ರೈತರಿಗೆ ಬಿಜೆಪಿ ದೀಪಾವಳಿಯ ಉಡುಗೊರೆಯಾಗಿ ಇಂತಹ ದ್ರೋಹ ಬಗೆದಿದೆ. ₹3 ಪರಿಹಾರ ಚೆಕ್‌ ನೀಡುವಾಗ ನಕಲಿ ದೇಶ ಭಕ್ತರು ಎಲ್ಲಿದ್ದರು. ಈ ಹಿಂದೆ ಇದೇ ರೈತರು ನಡೆಸಿದ ಹೋರಾಟ ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿತು. ದೆಹಲಿಯಲ್ಲಿ ಮುಳ್ಳುತಂತಿ, ತಡೆಗೋಡೆ, ಜಲಫಿರಂಗಿಗಳನ್ನು ಉಪಯೋಗಿಸಿತ್ತು. ಇದ್ದನ್ನು ರೈತರು ಇನ್ನೂ ಮರೆತಿಲ್ಲ ಎಂದರು.

ಹೋರಾಟದಲ್ಲಿ ಮಡಿದ ರೈತರಿಗೆ ಒಂದು ಸಾಂತ್ವನದ ಮಾತು ಹೇಳಿದ ಪ್ರಧಾನಿ ನಡೆ ಜನ ವಿರೋಧಿ ಮತ್ತು ರೈತ ವಿರೋಧಿಯಾಗಿದೆ. ಪ್ರತಿ ಮಾತಿನಲ್ಲೂ ದೇಶಭಕ್ತಿ ಎಂದು ಹೇಳಿಕೊಳ್ಳುವ ಆರ್‌ಎಸ್‌ಎಸ್‌ ಮುಖಂಡರು ಕೂಡ ಮಾತನಾಡಿಲ್ಲ. ಇದನ್ನು ಕಂಡರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ರೈತ ವಿರೋಧಿಗಳು ಎಂದು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಧಾರ್ಮಿಕ ಅಸಹನೆ ಉಂಟುಮಾಡುತ್ತಿವೆ. ಸಂವಿಧಾನದ ಪ್ರಕಾರ ಭಾರತದ ಎಲ್ಲಾ ಸಂಘಟನೆಗಳು ನೋಂದಾಯಿಸಿಕೊಂಡು ಲೆಕ್ಕಪತ್ರಗಳನ್ನು ಜನರ ಮುಂದಿಡಬೇಕು. ಹಿಂದುಳಿದರವ, ರೈತರ, ಕಾರ್ಮಿಕರ ಮತ್ತು ದಲಿತರ ನೋವು ಆರ್‌ಎಸ್‌ಎಸ್,  ಬಿಜೆಪಿಗೆ ಬೇಕಿಲ್ಲ. ಭಾವನಾತ್ಮಕವಾಗಿ ಸಮಾಜ ಒಡೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿರುವುದು ಖಂಡನೀಯ ಎಂದರು.

ಆಫ್ಘಾನಿಸ್ತಾನದ ವಿದೇಶಾಂಗ ಸಚಿವ ಮುತ್ತಾಕಿ ದೆಹಲಿ ಭೇಟಿ ಸಂದರ್ಭದಲ್ಲಿ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟ ವಿಚಾರ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಗವಾಯಿ ಅವರ ಮೇಲೆ ಚಪ್ಪಲಿ ಎಸೆತ ಘಟನೆಯನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಏಕೆ  ಖಂಡಿಸಲಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ತನೂಜ್‌ಕುಮಾರ್, ರೋಬಿನ್ ಮೋಸಸ್, ಚಂದ್ರಶೇಖರ್, ಶಾಂತಕುಮಾರ್, ವಿಜಯಕುಮಾರ್, ಹಿರೇಮಗಳೂರು ರಾಮಚಂದ್ರ ಉಪಸ್ಥಿತರಿದ್ದರು.

‘Central government insulted farmers by giving them a Rs 3 cheque’

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....