ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು ಇದೀಗ ಹಂಚಿಕೆ ಮಾಡಿದ್ದಾರೆ. ಮುಖ್ಯವಾಗಿ ಡಿಕೆಶಿ ಅವರು ಹಣಕಾಸು ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.
- ಡಿಸಿಎಂ ಡಾ.ಜಿ.ಪರಮೇಶ್ವರ್- ಕಂದಾಯ ಮತ್ತು ಯುವ ಸಬಲೀಕರಣ
- ಪ್ರಿಯಾಂಕ್ ಖರ್ಗೆ- ಗೃಹ ಇಲಾಖೆ ಮತ್ತು ಐಟಿಬಿಟಿ ಇಲಾಖೆ
- ಕೆ.ಜೆ. ಜಾರ್ಜ್- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ
- ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
- ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ
- ರಾಮಲಿಂಗಾರೆಡ್ಡಿ- ಜಲಸಂಪನ್ಮೂಲ ಇಲಾಖೆ
- ಕೃಷ್ಣ ಬೈರೇಗೌಡ- ಬೆಂಗಳೂರು ನಗರಾಭಿವೃದ್ಧಿ
- ಕೆ.ಹೆಚ್. ಮುನಿಯಪ್ಪ- ಆಹಾರ ಮತ್ತು ನಾಗರೀಕ ಸರಬರಾಜು
- ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ
- ಬೈರತಿ ಸುರೇಶ್- ಸಾರಿಗೆ ಇಲಾಖೆ
- ಯುಟಿ-ಖಾದರ್- ಆರೋಗ್ಯ ಇಲಾಖೆ
- ಡಾ.ಶರಣಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ ಇಲಾಖೆ
- ಯತೀಂದ್ರ ಸಿದ್ದರಾಮಯ್ಯ- ನಗರಾಭಿವೃದ್ಧಿ ಇಲಾಖೆ
ಸಚಿವರಾದ ಕೆ.ಹೆಚ್.ಮುನಿಯಪ್ಪ, ಎಂಬಿ ಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಖಾತೆಗಳನ್ನೇ ನೀಡಲಾಗಿದೆ.
Chief Minister D.K. Shivakumar allocates portfolios to 13 ministers in the cabinet
Leave a comment