Home namma chikmagalur chikamagalur ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ
chikamagalurHomeLatest Newsnamma chikmagalur

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು.

ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1955ರಲ್ಲಿ ಕೇವಲ 1,430 ರೂ. ಆರಂಭಿಕ ಠೇವಣಿಯೊಂದಿಗೆ ಆರಂಭಗೊಂಡ ಬ್ಯಾಂಕ್ ಇಂದು 28 ಶಾಖೆಗಳು, 129 ಪ್ರಾಥಮಿಕ ಸಹಕಾರ ಸಂಘಗಳು ಹಾಗೂ 267 ಇತರ ಸಹಕಾರ ಸಂಘಗಳು ಸೇರಿದಂತೆ ಒಟ್ಟು 396 ಸದಸ್ಯ ಸಹಕಾರ ಸಂಘಗಳ ಮೂಲಕ ಕೃಷಿ ಮತ್ತು ಕೃಷಿಯೇತರ ಕ್ಷೇತ್ರಗಳಿಗೆ ಸಾಲ ಸೌಲಭ್ಯ ಒದಗಿಸುತ್ತಿದೆ ಎಂದರು.

2025-26ನೇ ಸಾಲಿನ ಶಾಸನಬದ್ಧ ಲೆಕ್ಕ ಪರಿಶೋಧನೆ ಹಾಗೂ ನಬಾರ್ಡ್ ನಡೆಸಿದ ತಪಾಸಣೆಯಲ್ಲಿ ಬ್ಯಾಂಕ್ ಸತತವಾಗಿ ‘ಎ’ ವರ್ಗೀಕರಣ ಪಡೆದಿದೆ. ಬ್ಯಾಂಕ್ 2025-26ನೇ ಸಾಲಿನ ಅಂತ್ಯಕ್ಕೆ 65.99 ಕೋಟಿ ರೂ. ಷೇರು ಬಂಡವಾಳ ಹೊಂದಿದ್ದು, 2.24 ಲಕ್ಷಕ್ಕೂ ಅಧಿಕ ಠೇವಣಿದಾರರಿಂದ 1,568.53 ಕೋಟಿ ರೂ. ಠೇವಣಿ ಸಂಗ್ರಹಿಸಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರದ ಕೃಷಿ ಸಾಲ ಯೋಜನೆಯಡಿ 2025-26ನೇ ಸಾಲಿನಲ್ಲಿ ಜಿಲ್ಲೆಗೆ 75,119 ರೈತರಿಗೆ 1,017.19 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ್ತು. ಮಾರ್ಚ್ 2026ರ ಅಂತ್ಯಕ್ಕೆ 54,992 ರೈತರಿಗೆ 843.84 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸಲಾಗಿದೆ. 2026-27ನೇ ಸಾಲಿನಲ್ಲಿ 1,009 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದರು.

ಶೇ.3ರ ಬಡ್ಡಿದರದಲ್ಲಿ ಕೃಷಿ ಮಧ್ಯಮಾವಧಿ ಸಾಲದಡಿ 2025-26ರಲ್ಲಿ 380 ರೈತರಿಗೆ 26 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ 353 ರೈತರಿಗೆ 26 ಕೋಟಿ ರೂ. ಸಾಲ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲೂ 380 ರೈತರಿಗೆ 26 ಕೋಟಿ ರೂ. ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

2025-26ನೇ ಸಾಲಿನಲ್ಲಿ ಒಟ್ಟು 18,061 ಸಾಲಗಾರ ಸದಸ್ಯರಿಗೆ 569.57 ಕೋಟಿ ರೂ. ಕೃಷಿಯೇತರ ಸಾಲ ವಿತರಿಸಲಾಗಿದೆ. 2026-27ನೇ ಸಾಲಿನಲ್ಲಿ ಈ ಪ್ರಮಾಣವನ್ನು ಹೆಚ್ಚಿಸಿ 700 ಕೋಟಿ ರೂ. ಕೃಷಿಯೇತರ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿ.ಟಿ. ರವಿ ತಿಳಿಸಿದರು.

ಜಿಲ್ಲೆಯಲ್ಲಿ ಮಾರ್ಚ್ 2026ರ ಅಂತ್ಯಕ್ಕೆ ಒಟ್ಟು 12,355 ಸ್ವಸಹಾಯ ಗುಂಪುಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ 32 ಹೊಸ ಗುಂಪುಗಳನ್ನು ರಚಿಸಲಾಗಿದೆ. ಎನ್‌ಆರ್‌ಎಲ್‌ಎಂ ಯೋಜನೆಯಡಿ 10 ಸ್ವಸಹಾಯ ಗುಂಪುಗಳಿಗೆ 30 ಲಕ್ಷ ರೂ. ಸಾಲ ವಿತರಿಸಲಾಗಿದೆ. ಇದರಿಂದ ಬಡ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದರು.

ರೈತರು ಮತ್ತು ಸಾಲಗಾರ ಸದಸ್ಯರ ಪ್ರಾಮಾಣಿಕ ಮರುಪಾವತಿ, ಆಡಳಿತ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ನಿರಂತರ ಪರಿಶ್ರಮದಿಂದ 2025-26ನೇ ಸಾಲಿನಲ್ಲಿ 98.05ರಷ್ಟು ಸಾಲ ವಸೂಲಾತಿ ಸಾಧಿಸಲಾಗಿದೆ. ಬ್ಯಾಂಕಿನ ಎನ್‌ಪಿಎ ಪ್ರಮಾಣ ಶೇ.3.50ರಷ್ಟಿದೆ ಎಂದು ತಿಳಿಸಿದರು.

ಬ್ಯಾಂಕ್ 2013-14ನೇ ಸಾಲಿನಿಂದ ನಿರಂತರವಾಗಿ ಲಾಭ ಗಳಿಸುತ್ತಿದ್ದು, 2025-26ನೇ ಸಾಲಿನಲ್ಲೂ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯ ಸಹಕಾರ ಸಂಘಗಳಿಗೆ ಡಿವಿಡೆಂಡ್ ನೀಡುವ ಉದ್ದೇಶವಿದ್ದು, ಮಹಾಸಭೆಯಲ್ಲಿ ಈ ಕುರಿತು ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮೊಬೈಲ್ ಬ್ಯಾಂಕಿಂಗ್, ಯುಪಿಐ ಮೂಲಕ PhonePe ಹಾಗೂ Google Pay ಪಾವತಿ, ಐಎಂಪಿಎಸ್ ಮತ್ತು ಶಾಖೆಗಳಲ್ಲಿ ಮೈಕ್ರೋ ಎಟಿಎಂ ಸೇವೆಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲಾದ್ಯಂತ ಇಂಟರ್‌ನೆಟ್ ಬ್ಯಾಂಕಿಂಗ್ ಸೇವೆ ಒದಗಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಗ್ರಾಹಕರಿಗೆ ಲಭ್ಯವಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮತ್ತಷ್ಟು ಹೊಸ ಸೇವೆಗಳನ್ನು ಬ್ಯಾಂಕ್ ಅಳವಡಿಸಿಕೊಳ್ಳಲಿದೆ ಎಂದು ಹೇಳಿದರು. ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಗಳಿಗೂ ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ ನೋಂದಣಿ ವ್ಯವಸ್ಥೆ ಮಾಡಲಾಗಿದೆ.

ಸದಸ್ಯ ಸಹಕಾರ ಸಂಘಗಳ ಕಟ್ಟಡ ನಿರ್ಮಾಣ, ಪೀಠೋಪಕರಣ ಖರೀದಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ 86 ಲಕ್ಷ ರೂ. ಮೀಸಲಿಡಲಾಗಿದೆ. ಈ ಮೊತ್ತದ ಮೂಲಕ ಜಿಲ್ಲೆಯ ಸಹಕಾರ ಸಂಘಗಳಿಗೆ ಮೂಲಸೌಕರ್ಯ ಅಭಿವೃದ್ಧಿಗೆ ನೆರವು ನೀಡಲಾಗುವುದು ಎಂದು ತಿಳಿಸಿದರು.

ಬ್ಯಾಂಕ್ 2025-26ನೇ ಸಾಲಿನಲ್ಲಿ ಶೇ.9.27ರ ಸಿಆರ್‌ಎಆರ್ ಕಾಯ್ದುಕೊಂಡಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಆನಂದಪ್ಪ, ಬಸವನಗೌಡ, ಜೈಪಾಲ್, ಅದ್ದಡ ಸತೀಶ್, ರಮೇಶ್, ಸೋನಾಲ್ ಗೌಡ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Chikkamagaluru DCC Bank posts net profit of ₹6.87 crore.

Share

Leave a comment

Leave a Reply

Your email address will not be published. Required fields are marked *

Don't Miss

ಏಡ್ಸ್ ಭಾದಿತ ವ್ಯಕ್ತಿ ಎಲ್ಲರಂತೆ ಜೀವಿಸಬಹುದು

ಚಿಕ್ಕಮಗಳೂರು:  ಹೆಚ್‌ಐವಿ ಸೋಂಕಿತ ವ್ಯಕ್ತಿಗೆ ಸಾವು ಬಿಟ್ಟರೆ ಬೇರೆ ಯಾವುದೇ ಮಾರ್ಗವಿರ ಲಿಲ್ಲ. ಆದರೆ ಇದೀಗ ವೈದ್ಯಕೀಯ ಸಂಶೋಧನೆಗಳ ಫಲವಾಗಿ ಸೋಂಕಿನ ವ್ಯಕ್ತಿ, ಸಂಪೂರ್ಣ ಕಾಯಿಲೆ ಯಿಂದ ಮುಕ್ತರಾಗದಿದ್ದರೂ ಎಲ್ಲರಂತೆ ದೀರ್ಘಕಾಲ...

ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಆಗ್ರಹಿಸಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು:  ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನಗರದ ಕೆನರಾ ಬ್ಯಾಂಕ್ ಮುಖ್ಯ ಕಚೇರಿ ಆವರಣದಲ್ಲಿ ಶುಕ್ರವಾರ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯು ಕ್ತ ವೇದಿಕೆ ಜಿಲ್ಲಾ ಸಮಿತಿಯಿಂದ...

Related Articles

ಕಾಫಿ ಉದ್ಯಮ ಉಳಿಸಲು ಸಂಘಟಿತ ಹೋರಾಟ ಅಗತ್ಯ

ಚಿಕ್ಕಮಗಳೂರು: ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಹೆಚ್ಚಳ, ಮಾರುಕಟ್ಟೆ...

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು...

ಜನಾಭಿಪ್ರಾಯ ಆಲಿಸಲು ಸಿಎಂ ಆಗಮನ ಜನಪರ ಕಾಳಜಿಯ ಸಾಕ್ಷಿ

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕುರಿತು ಜನಸಾಮಾನ್ಯರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಲಿಸಲು...

ಅಕ್ರಮವಾಗಿ ಕಡವೆ ಬೇಟೆ: 70 ಕೆ.ಜಿ. ಮಾಂಸ ವಶ-ಮೂವರ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ.ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆಯಾಡಿ ಮಾಂಸವನ್ನಾಗಿ ಕತ್ತರಿಸುತ್ತಿದ್ದ ವೇಳೆ...