Home Latest News ಚಿಕ್ಕಮಗಳೂರು ಪೊಲೀಸರು ಸೂಪರ್ ಹೀರೋಗಳು : ವೇದ ಕೃಷ್ಣಮೂರ್ತಿ
Latest News

ಚಿಕ್ಕಮಗಳೂರು ಪೊಲೀಸರು ಸೂಪರ್ ಹೀರೋಗಳು : ವೇದ ಕೃಷ್ಣಮೂರ್ತಿ

Share
Share

ಚಿಕ್ಕಮಗಳೂರು : ದೇಶದಲ್ಲಿ ನಾಲ್ಕು ವಿಧವಾದ ಹೀರೋಗಳಿದ್ದಾರೆ ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ನನ್ನ ಪಾಲಿಗೆ ಸೂಪರ್ ಹೀರೋಗಳು ಎಂದು ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಪಟು ವೇದ ಕೃಷ್ಣಮೂರ್ತಿ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಎರಡು ದಿನಗಳ ವಾರ್ಷಿಕ ಪೊಲೀಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು, ಪ್ರಸ್ತುತ ದೇಶವನ್ನು ಕಾಪಾಡುತ್ತಿರುವ ಸೈನಿಕರು, ದೇಶದ ಕ್ರೀಡಾಪಟುಗಳು ಹಾಗೂ ಪೊಲೀಸರು ಇವರುಗಳು ದೇಶದ ಹೀರೋಗಳು ಎಂದು ವೇದ ಕೃಷ್ಣಮೂರ್ತಿ ನುಡಿದರು.

ನಾನು ಕ್ರಿಕೆಟ್ ಆಡಲು ಪ್ರಪಂಚದ ಬೇರೆ ಬೇರೆ ಶ್ರೀಮಂತ ದೇಶಗಳಿಗೆ ಹೋಗಿ ನೋಡಿದ್ದೇನೆ, ಆದರೆ ಚಿಕ್ಕಮಗಳೂರು ಜಿಲ್ಲೆಯಂತಹ ಪ್ರದೇಶ ಪ್ರಪಂಚದಲ್ಲೇ ಎಲ್ಲೂ ನೋಡಿಲ್ಲ ‌ಎಂದು ವೇದ ಜಿಲ್ಲೆಯನ್ನು ಬಣ್ಣಿಸಿದ್ದಾರೆ. ಸಮೀಕ್ಷೆಯೊಂದರ ಪ್ರಕಾರ ಅತ್ಯಂತ ಸುರಕ್ಷಿತ ಜಿಲ್ಲೆ ನಮ್ಮದು, ಇಲ್ಲಿನ ಜನರು ಪ್ರೀತಿ, ಪ್ರೇಮ, ವಾತ್ಸಲ್ಯ ಮನೋಭಾವನೆ ಹೊಂದಿರುವ ಜನರು ಮತ್ತೆಲ್ಲೂ ಸಿಗುವುದಿಲ್ಲ ಎಂದು ವೇದ ಕೃಷ್ಣಮೂರ್ತಿ ವ್ಯಾಖ್ಯಾನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಜಿಲ್ಲಾ ಪಂಚಾಯಿತಿ ಸಿಇಓ ಎಚ್ಎಸ್ ಕೀರ್ತನ, ಸೇರಿದಂತೆ ಹಲವು ಗಣ್ಯರು ಬಲೂನ್ ಹಾಗೂ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲೆಯ ಹಲವೆಡೆ ಗಳಿಂದ ಆಗಮಿಸಿದ್ದ ಪೊಲೀಸ್ ಕ್ರೀಡಾಪಟುಗಳು ಆಕರ್ಷಕ ಪತಸಂಚಲನ ನಡೆಸಿದರು. ಐದು ಬಾರಿಯ ಆ ಚಾಂಪಿಯನ್ ಗಿರೀಶ್ ಕ್ರೀಡಾ ಜ್ಯೋತಿಯನ್ನು ವೇದ ಕೃಷ್ಣ ಮೂರ್ತಿಗೆ ಹಸ್ತಾಂತರಿಸಿದರು. ಇಂದು ಮತ್ತು ನಾಳೆಯೂ ವಿವಿಧ ಕ್ರೀಡೆಗಳು ಡಿಎಆರ್ ಮೈದಾನದಲ್ಲಿ ನಡೆಯಲಿವೆ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...