Home Latest News ಚಿಕ್ಕಮಗಳೂರು ಪೊಲೀಸರು ಸೂಪರ್ ಹೀರೋಗಳು : ವೇದ ಕೃಷ್ಣಮೂರ್ತಿ
Latest News

ಚಿಕ್ಕಮಗಳೂರು ಪೊಲೀಸರು ಸೂಪರ್ ಹೀರೋಗಳು : ವೇದ ಕೃಷ್ಣಮೂರ್ತಿ

Share
Share

ಚಿಕ್ಕಮಗಳೂರು : ದೇಶದಲ್ಲಿ ನಾಲ್ಕು ವಿಧವಾದ ಹೀರೋಗಳಿದ್ದಾರೆ ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ನನ್ನ ಪಾಲಿಗೆ ಸೂಪರ್ ಹೀರೋಗಳು ಎಂದು ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಪಟು ವೇದ ಕೃಷ್ಣಮೂರ್ತಿ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಎರಡು ದಿನಗಳ ವಾರ್ಷಿಕ ಪೊಲೀಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು, ಪ್ರಸ್ತುತ ದೇಶವನ್ನು ಕಾಪಾಡುತ್ತಿರುವ ಸೈನಿಕರು, ದೇಶದ ಕ್ರೀಡಾಪಟುಗಳು ಹಾಗೂ ಪೊಲೀಸರು ಇವರುಗಳು ದೇಶದ ಹೀರೋಗಳು ಎಂದು ವೇದ ಕೃಷ್ಣಮೂರ್ತಿ ನುಡಿದರು.

ನಾನು ಕ್ರಿಕೆಟ್ ಆಡಲು ಪ್ರಪಂಚದ ಬೇರೆ ಬೇರೆ ಶ್ರೀಮಂತ ದೇಶಗಳಿಗೆ ಹೋಗಿ ನೋಡಿದ್ದೇನೆ, ಆದರೆ ಚಿಕ್ಕಮಗಳೂರು ಜಿಲ್ಲೆಯಂತಹ ಪ್ರದೇಶ ಪ್ರಪಂಚದಲ್ಲೇ ಎಲ್ಲೂ ನೋಡಿಲ್ಲ ‌ಎಂದು ವೇದ ಜಿಲ್ಲೆಯನ್ನು ಬಣ್ಣಿಸಿದ್ದಾರೆ. ಸಮೀಕ್ಷೆಯೊಂದರ ಪ್ರಕಾರ ಅತ್ಯಂತ ಸುರಕ್ಷಿತ ಜಿಲ್ಲೆ ನಮ್ಮದು, ಇಲ್ಲಿನ ಜನರು ಪ್ರೀತಿ, ಪ್ರೇಮ, ವಾತ್ಸಲ್ಯ ಮನೋಭಾವನೆ ಹೊಂದಿರುವ ಜನರು ಮತ್ತೆಲ್ಲೂ ಸಿಗುವುದಿಲ್ಲ ಎಂದು ವೇದ ಕೃಷ್ಣಮೂರ್ತಿ ವ್ಯಾಖ್ಯಾನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಜಿಲ್ಲಾ ಪಂಚಾಯಿತಿ ಸಿಇಓ ಎಚ್ಎಸ್ ಕೀರ್ತನ, ಸೇರಿದಂತೆ ಹಲವು ಗಣ್ಯರು ಬಲೂನ್ ಹಾಗೂ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲೆಯ ಹಲವೆಡೆ ಗಳಿಂದ ಆಗಮಿಸಿದ್ದ ಪೊಲೀಸ್ ಕ್ರೀಡಾಪಟುಗಳು ಆಕರ್ಷಕ ಪತಸಂಚಲನ ನಡೆಸಿದರು. ಐದು ಬಾರಿಯ ಆ ಚಾಂಪಿಯನ್ ಗಿರೀಶ್ ಕ್ರೀಡಾ ಜ್ಯೋತಿಯನ್ನು ವೇದ ಕೃಷ್ಣ ಮೂರ್ತಿಗೆ ಹಸ್ತಾಂತರಿಸಿದರು. ಇಂದು ಮತ್ತು ನಾಳೆಯೂ ವಿವಿಧ ಕ್ರೀಡೆಗಳು ಡಿಎಆರ್ ಮೈದಾನದಲ್ಲಿ ನಡೆಯಲಿವೆ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...