Home Political News ಚಿಕ್ಕಮಗಳೂರು ನಗರ ಬೂದಿ ಮುಚ್ಚಿದ ಕೆಂಡ : ಬೈಕ್ ಗೆ ಟೈರ್ ಗೆ ಬೆಂಕಿ
Political News

ಚಿಕ್ಕಮಗಳೂರು ನಗರ ಬೂದಿ ಮುಚ್ಚಿದ ಕೆಂಡ : ಬೈಕ್ ಗೆ ಟೈರ್ ಗೆ ಬೆಂಕಿ

Share
Share

ಚಿಕ್ಕಮಗಳೂರು : ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ ವಿಕೋಪಕ್ಕೆ ತಿರುಗಿದೆ ನಗರದ ಕೆಲವೆಡೆ ಅಹಿತಕರ ಘಟನೆಗಳು ನಡೆದಿದ್ದು. ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ನಗರದ ಹೊರವಲಯದ ರಾಂಪುರ ಸರ್ಕಲ್ ನಲ್ಲಿ ಬೈಕ್ ಗೆ ಬಿಜೆಪಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ. ಮತ್ತೊಂದೆಡೆ ನಗರದ ಎಂ.ಜಿ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ ಈ ವೇಳೆ ವರ್ತಕರೊಬ್ಬರು ಅಂಗಡಿ ಮುಚ್ಚಲು ವಿರೋಧ ವ್ಯಕ್ತಪಡಿಸಿದ್ದಾರೆ. ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ನಗರದ ವಿವಿಧೆಡೆ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ನಗರದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಕಾರ್ಯಕರ್ತರು ಮುಖಕ್ಕೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಿ.ಟಿ ರವಿ ಭಾವಚಿತ್ರವನ್ನು ಹಿಡಿದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ, ನಗರದ ಆಜಾದ್ ಪಾರ್ಕ್ ನ ಮಯೂರ ಹೋಟೆಲ್ ಬಳಿ ಘಟನೆ ನಡೆದಿದ್ದು,

ಮುಖಾಮುಖಿಯಾದ ಎರಡೂ ಕಡೆಯ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಆಜಾದ್ ವೃತ್ತದಲ್ಲಿ ಸಿ.ಟಿ ರವಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೈ ಪಡೆ
ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ವೇಳೆ ಸಿ.ಟಿ ರವಿ ವಿರುದ್ಧ ಅವಾಚ್ಯ ಪದ ಬಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವ ಮೋರ್ಚಾ ಕಾರ್ಯದರ್ಶಿ ಸಚಿನ್ ಕುಮಾರ್ ಮೇಲೆ ಹಲ್ಲೆ ನಡೆದಿದೆ. ಮನಸ್ಸೊ ಇಚ್ಚೆ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದರು. ಅಟ್ಟಾಡಿಸಿಕೊಂಡು ಹೋಗಿ ಕಾಂಗ್ರೆಸಿಗರು ಕಾರ್ಯಕರ್ತರು ಹಲ್ಲೆ ನಡೆಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...