Home namma chikmagalur chikamagalur ದ್ವೀತಿಯ ಪಿಯುಸಿಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ 90.80ರಷ್ಟು ಫಲಿತಾಂಶ
chikamagalurHomeLatest Newsnamma chikmagalur

ದ್ವೀತಿಯ ಪಿಯುಸಿಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ 90.80ರಷ್ಟು ಫಲಿತಾಂಶ

Share
Share

ಚಿಕ್ಕಮಗಳೂರು: ಪಿಯುಸಿ ಫಲಿತಾಂಶದಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಶೇಕಡವಾರು ಉತ್ತಮ ಸಾಧನೆ ಮಾಡಿದೆ, ಕಳೆದ ವರ್ಷ ಶೇಕಡ 79.56ರಷ್ಟು ಫಲಿತಾಂಶ ಪಡೆದು ಚಿಕ್ಕಮಗಳೂರು ಈ ಬಾರಿ ಶೇಕಡ 90.80ರಷ್ಟು ಫಲಿತಾಂಶ ಬಂದಿದೆ

ಜಿಲ್ಲೆಯಲ್ಲಿ ಒಟ್ಟು 8,149 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 7,399 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಜಿಲ್ಲೆಗೆ ಶೇ. 90.80ರಷ್ಟು ಫಲಿತಾಂಶ ಬಂದಿದೆ. ಶೇಕಡವಾರು ಉತ್ತಮ ಫಲಿತಾಂಶ ಬಂದಿದ್ದರೂ ಜಿಲ್ಲಾ ಮಟ್ಟದ ಫಲಿತಾಂಶದಲ್ಲಿ ಕಾಫಿನಾಡು ಒಂದು ಸ್ಥಾನ ಕುಸಿತಗೊಂಡು ಹತ್ತನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

ಈ ಬಾರಿ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ 2,044 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಇದರಲ್ಲಿ 1,682 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ಕಲಾ ವಿಭಾಗದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಶೇ. 82.29 ರಷ್ಟು ಫಲಿತಾಂಶ ಬಂದಿದೆ. ಇನ್ನು ವಾಣಿಜ್ಯ ವಿಭಾಗದಲ್ಲಿ 2,688 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಇದರಲ್ಲಿ 2,486 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಶೇಕಡ 92.49 ರಷ್ಟು ಫಲಿತಾಂಶ ಬಂದಿದೆ.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ, ಇಂತಿನಿಂದಲೂ ವಿಜ್ಞಾನ ವಿಭಾಗದಲ್ಲಿ ತನ್ನ ಪ್ರಾಬಲ್ಯ ತೋರುತ್ತಲೇ ಬಂದಿದೆ. ಈ ಬಾರಿ ಪಿಯುಸಿ ಫಲಿತಾಂಶದಲ್ಲಿಯೂ ಸಹ ವಿಜ್ಞಾನ ವಿಭಾಗದಲ್ಲಿ ಚಿಕ್ಕಮಗಳೂರು ಜಿಲ್ಲೆ ಶೇ.94.56ರಷ್ಟು ಫಲಿತಾಂಶ ಪಡೆದಿರುವುದು ವಿಶೇಷ. ವಿಜ್ಞಾನ ವಿಭಾಗದಲ್ಲಿ 3,417 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇವರಲ್ಲಿ 3,231 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಮೊದಲ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಶೇಕಡವಾರು ಆಧಾರದ ಮೇಲೆ ಚಿಕ್ಕಮಗಳೂರು ಜಿಲ್ಲೆ ಹತ್ತನೇ ಸ್ಥಾನದಲ್ಲಿದ್ದರೂ, ಪುನರಾವರ್ತಿತ ಹಾಗೂ ಖಾಸಗಿಯಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪರಿಗಣಿಸಿದರೆ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿಯೇ 7ನೇ ಸ್ಥಾನದಲ್ಲಿದೆ.

Chikmagalur district scores 90.80% in second PUC

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್

ಚಿಕ್ಕಮಗಳೂರು:  ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ  ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ವಿಶ್ವ ಪ್ರಸಿದ್ಧ ಎತ್ತರದ ಶಿಖರ ಮುಳ್ಳಯ್ಯನಗಿರಿ...

ನಗರಸಭೆಯಲ್ಲಿ 2.60 ಕೋಟಿ ರೂ. ಉಳಿತಾಯ ಬಜೆಟ್‌ ಮಂಡನೆ

ಚಿಕ್ಕಮಗಳೂರು: ನಗರ ಸಭೆ ಸಿಬ್ಬಂದಿ ವೇತನ, ವಿದ್ಯುತ್‌ ಬಿಲ್‌ ಪಾವತಿ ಅನುದಾನ ಸೇರಿದಂತೆ ವಾರ್ಷಿಕ ಕೇವಲ 58 ಕೋಟಿ ರು.ನಷ್ಟು ಆದಾಯ ಹೊಂದಿರು ಚಿಕ್ಕಮಗಳೂರು ನಗರ ಸಭೆಯು ರಾಜ್ಯ ಮತ್ತು ಕೇಂದ್ರ ಸರ್ಕಾರದ...

Related Articles

ಪ್ರಚೋದಕಾರಿ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷರ ಬಂಧನಕ್ಕೆ ಮನವಿ

ಚಿಕ್ಕಮಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಪ್ರಚೋದಕಾರಿ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ...

ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿದೆ

ಚಿಕ್ಕಮಗಳೂರು: ಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊ ಡ್ಡ ಸವಾಲಾಗಿ ಪರಿಣಾಮಿಸಿದೆ. ಪ್ರಸ್ತುತ...

ನಾಪತ್ತೆಯಾದ ಬಾಲಕಿಗಾಗಿ ಎರಡನೇ ದಿನವೂ ಶೋಧ ಕಾರ್ಯ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಾಧಾರ ಜಲಪಾತದ ಬಳಿ ನಾಪತ್ತೆಯಾಗಿರುವ ಕೇರಳ ಮೂಲದ ಬಾಲಕಿಯ ಪತ್ತೆಗಾಗಿ...

ನಾಪತ್ತೆಯಾದ ತನ್ನ ಮಗಳನ್ನು ಯಾರೋ ಅಪಹರಿಸಿದ್ದಾರೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ...