Home namma chikmagalur chikamagalur ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ
chikamagalurHomeLatest Newsnamma chikmagalur

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

Share
Share

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ 29ರವರೆಗೆ ಬೆಂಗಳೂರಿನ ದೇವಸಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾವಳಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಮಹಿಳಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 16 ಪ್ರತಿಷ್ಠಿತ ಜಿಲ್ಲಾ ತಂಡಗಳು ಈ ನಾಕ್‌ಔಟ್ ಮಾದರಿಯ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. ಮಹಿಳಾ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಚಿಕ್ಕಮಗಳೂರು ತಂಡ ಸೆಮಿಫೈನಲ್‌ನಲ್ಲಿ ಬೆಂಗಳೂರು ಫ್ರೆಂಡ್ಸ್ ತಂಡವನ್ನು ರೋಚಕ ಹಣಾಹಣಿಯಲ್ಲಿ ಮಣಿಸಿ ಫೈನಲ್‌ಗೆ ಪ್ರವೇಶಿಸಿತು.

ಸೆಮಿಫೈನಲ್ ಪಂದ್ಯವು 18–18 ಅಂಕಗಳ ಸಮಬಲದಲ್ಲಿ ಅಂತ್ಯಗೊಂಡಿತು. ಬಳಿಕ ನಡೆದ ‘ಬೆಸ್ಟ್-5 ರೈಡ್’ ಹಂತವೂ ಸಮಬಲದಲ್ಲೇ ಮುಕ್ತಾಯವಾಯಿತು. ಅಂತಿಮವಾಗಿ ನಡೆದ ಗೋಲ್ಡನ್ ರೈಡ್‌ನಲ್ಲಿ ಒಂದು ಅಂಕದ ಅಂತರದಿಂದ ಜಯಗಳಿಸಿದ ಚಿಕ್ಕಮಗಳೂರು ತಂಡ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು.

ಫೈನಲ್ ಪಂದ್ಯದಲ್ಲಿ ಪ್ರತಿಷ್ಠಿತ ಎಸ್‌ಡಿಎಂ ಉಜಿರೆ ತಂಡವನ್ನು ಎದುರಿಸಿದ ಚಿಕ್ಕಮಗಳೂರು ಮಹಿಳಾ ತಂಡ ಆರಂಭದಿಂದಲೇ ಪ್ರಾಬಲ್ಯ ಮೆರೆದಿದ್ದು, 10 ಅಂಕಗಳ ಅಂತರದಿಂದ ಭರ್ಜರಿ ಜಯ ಸಾಧಿಸಿ ರಾಜ್ಯ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.

ತಂಡದ ಈ ಸಾಧನೆಯಿಂದ ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿ ತಂದಿರುವ ಮಹಿಳಾ ಕಬಡ್ಡಿ ಆಟಗಾರ್ತಿಯರಿಗೆ ಜಿಲ್ಲೆಯ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿಯೂ ಇದೇ ಸಾಧನೆಯನ್ನು ಮುಂದುವರಿಸಲಿ ಎಂದು ಶುಭ ಹಾರೈಸಿದ್ದಾರೆ.

Chikmagalur women’s team wins state-level kabaddi championship

Share

Leave a comment

Leave a Reply

Your email address will not be published. Required fields are marked *

Don't Miss

ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹಿಸಿ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪ್ರತಿಭಟನೆ

ಚಿಕ್ಕಮಗಳೂರು: ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪ್ರಹಾರವನ್ನು ಖಂಡಿಸಿರುವ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪಕ್ಷವು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಕೇಂದ್ರದ ಶಿಕ್ಷಣ ಸಚಿವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ...

ಕಾಫಿ ತೋಟದ ಮಾಲೀಕ ಹಾರಿಸಿದ ಗುಂಡೇಟಿನಿಂದ ಬಾಲಕನಿಗೆ ಗಾಯ

ಮೂಡಿಗೆರೆ: ಕೂಲಿ ಹಣದ ವಿಚಾರವಾಗಿ ಕಾಫಿ ತೋಟದ ಮಾಲೀಕ ಹಾಗೂ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದಾಗ, ತೋಟದ ಮಾಲೀಕ ಹಾರಿಸಿದ ಗುಂಡು 4 ವರ್ಷದ ಬಾಲಕನ ತಲೆಗೆ ತಾಗಿದ ಘಟನೆ...

Related Articles

ತಾಕತ್ತಿದ್ದರೆ ಸಿ.ಟಿ. ರವಿಯನ್ನು ತಡೆಯಿರಿ

  ಚಿಕ್ಕಮಗಳೂರು, ಜು.30: ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ಟಿ. ರವಿ...

ಜಲಯೋಗ ಸಾಧನೆಯಲ್ಲಿ ವಕೀಲ ವಿ.ಕೆ.ರಘು ವಿಶ್ವ ದಾಖಲೆ

ಚಿಕ್ಕಮಗಳೂರು: ನಗರದ ವಕೀಲ ವಿ.ಕೆ.ರಘು ಅವರು ಜಲಯೋಗ ಸಾಧನೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ...

ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಲು ಕ್ಯಾನ್ ಅದಾಲತ್

ಚಿಕ್ಕಮಗಳೂರು: ಬ್ಯಾಂಕ್ ಸುಸ್ತಿದಾರ ಬೆಳೆಗಾರರ ಅನುಕೂಲಕ್ಕಾಗಿ ಕೆನರಾ ಬ್ಯಾಂಕ್ ಕಾಫಿ ಬೆಳೆಯುವ ಜಿಲ್ಲೆಗಳ ಆಯ್ದ ಕೆಲವು...

ಅಂಚೆ ಮತ ಮರು ಎಣಿಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ

ಶೃಂಗೇರಿ: ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ...